ಕಾಪು: ಕಾಪು ಕಟಪಾಡಿ ಪಡುಬಿದ್ರಿ ಶಿರ್ವ ಕಾರ್ಕಳ ಬೆಳ್ಮನ್ ಮುಂತಾದ ಕಡೆಗಳಲ್ಲಿ ನಿಲ್ಲಿಸಿದ್ದ ಲಾರಿ-ಟೆಂಪೋ ಇತ್ಯಾದಿ ವಾಹನಗಳ ಬ್ಯಾಟರಿ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಕಳ್ಳತನ ಪ್ರಕರಣದ ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಕಳ್ಳರನ್ನು ಮೇಲಾಧಿಕಾರಿ ಅವರ ನಿರ್ದೇಶನದಂತೆ ಕಾರ್ಕಳ ಪೊಲೀಸ್ ಉಪಾಧೀಕ್ಷಕರು ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಮಹಮ್ಮದ್ ಶರೀಫ್ ಕಾಪು , ಅಲ್ತಾಫ್ ಚಂದ್ರ ನಗರ ,ಅಬ್ದುಲ್ ರೆಹಮಾನ್ ಮೂಳೂರು, ಫರ್ಜೀನ್ ಅಹಮ್ಮದ್ ಮೂಳೂರು, ಅಫ್ಜಲ್ ರೆಹಮಾನ್ ಮೂಳೂರು, ಮಹಮ್ಮದ್ ಇಜಾಜ್ ಮೂಳೂರು, ಇವರನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ 22 ಬ್ಯಾಟರಿ ಸ್ವಿಫ್ಟ್ ಕಾರ್ ಒಂದು ಆಲ್ಟೊ ಕಾರ್ ಹಾಗೂ ಇತರೆ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಈ ಕಾರ್ಯಾಚರಣೆಯನ್ನು ಎಂ ವಿಷ್ಣುವರ್ಧನ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉಡುಪಿ ಮತ್ತು ಶ್ರೀಕುಮಾರ ಚಂದ್ರ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಡುಪಿ ಇವರ ನಿರ್ದೇಶನದಂತೆ ವಿಜಯಪ್ರಸಾದ್ ಪೊಲೀಸ್ ಉಪಾಧೀಕ್ಷಕರು ಕಾರ್ಕಳ ವಿಭಾಗದ ಇವರ ಮಾರ್ಗದರ್ಶನದಲ್ಲಿ ಕಾಪು ವೃತ್ತ ನಿರೀಕ್ಷಕರಾದ ಶ್ರೀ ಪ್ರಕಾಶ್ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಪಿಎಸ್ಐ ತಿಮ್ಮೇಶ್ ರಾಘವೇಂದ್ರ ಅಪರಾಧ ಪತ್ತೆ ತಂಡದ ಪ್ರವೀಣ್ ಕುಮಾರ್ ನಾರಾಯಣ ರಾಜೇಶ್ ಹೇಮರಾಜ್ ಸಂದೇಶ ಆನಂದ ರಘು ಸಂತೋಷ್ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…