ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದೆ.
ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜನರು ಮನವಿ ಸಲ್ಲಿಸಿದ್ದರು. ಆದರೆ ಜನರು ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ ಪತ್ತೆಯಾಗಿರುತ್ತದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮನವಿ ಪತ್ರಗಳು ಬಿದ್ದಿವೆ. ಗಂಟೆಗಟ್ಟಲೆ ಕಾದು ಸಿಎಂಗೆ ಸಲ್ಲಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಕಿಡಿ ಕಾರಿದೆ.
ಇನ್ನು ಕೂಡಲೇ ಸಿದ್ದರಾಮಯ್ಯ ಅವರು ಜನರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಸಿಎಂ ಜಿಲ್ಲೆಗೆ ಬಂದಾಗ ಕಪ್ಪುಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಸಿದ್ದಾರೆ. ತಮ್ಮ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…