ವಿಶಾಖಪಟ್ಟಣ,: ಆಂಧ್ರ ಪ್ರದೇಶದ ವಿಶಾಖ ಸಾಗರ ನಗರ ಬೀಚ್ನಲ್ಲಿ ಅಪಾಯಕಾರಿ ಹಾವೊಂದು ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಹಾವು ಸ್ಥಳೀಯ ಮೀನುಗಾರರ ಬಲೆಗೆ ಬಿದ್ದಿದೆ.
ಮೊದ ಮೊದಲು ಹಾವನ್ನು ಮೀನು ಅಂದುಕೊಂಡಿದ್ದ ಮೀನುಗಾರರು ಅದನ್ನು ಹತ್ತಿರದಿಂದ ನೋಡಿದ ಬಳಿಕ ನಿಬ್ಬೆರಗಾಗಿದ್ದಾರೆ. ಬಳಿಕ ಆ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಯಿತು. ಹಾವಿನ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದು, ಅದೊಂದು ಅಪಾಯಕಾರಿ ಹಾವು ಎಂದಿದ್ದಾರೆ. ಅದರ ವೈಜ್ಞಾನಿಕ ಹೆಸರು ‘ಹೈಡ್ರೋಫಿಸ್ ಗ್ರಾಸಿಲಿಸ್’ ಎಂದು ತಿಳಿಸಿದರು.
ಈ ಮೀನು ಹೆಚ್ಚಾಗಿ ಆಳ ಸಮುದ್ರದಲ್ಲಿ ಸುತ್ತಾಡುತ್ತವೆ. ಇದನ್ನು ಸ್ಥಳೀಯವಾಗಿ ಸಮುದ್ರ ಹಾವೆಂದು ಮೀನುಗಾರರು ಕರೆಯುತ್ತಾರೆ. ಸಣ್ಣ ಸಣ್ಣ ಮೀನುಗಳನ್ನು ತಿಂದು ಬದುಕುಳಿಯುತ್ತವೆ. ಆಹಾರವನ್ನು ಹುಡುಕಾಡುವ ಸಂದರ್ಭದಲ್ಲಿ ಈ ಹಾವು ಮೀನುಗಾರರ ಬಲೆಗೆ ಸಿಲುಕಿದೆ ಎನ್ನಲಾಗಿದೆ.
ಇನ್ನು ಈ ಹಾವು ಸಮುದ್ರದಲ್ಲಿ ಅತ್ಯಂತ ವೇಗವಾಗಿ ಚಲಿಸುತ್ತದೆ. ಅಂದರೆ, ಕಣ್ಣು ಮಿಟುಕಿಸುವುದರಲ್ಲಿ ನಮ್ಮಿಂದ ಮಾಯವಾಗಿಬಿಡುತ್ತವೆಯಂತೆ. ಈ ಹಾವೇನಾದರೂ ಕಡಿದರೆ, ತಕ್ಷಣ ವೈದ್ಯರ ನೆರವು ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಬಹು ಬೇಗ ಸಾವು ಸಂಭವಿಸುತ್ತದೆ. ಈ ಹಾವು ಮುಂಜಾನೆ ಮೀನಿನ ಬಲೆಗೆ ಬಿದ್ದಿದೆ. ರಾತ್ರಿಯಾಗಿದ್ದರೆ ಕಾಣುತ್ತಿರಲಿಲ್ಲ. ಅದರಿಂದ ಅಪಾಯ ಉಂಟಾಗುವ ಸಾಧ್ಯತೆ ಇತ್ತು. ಸದ್ಯ ಗೊತ್ತಾಗಿದ್ದು, ಒಳ್ಳೆಯದಾಯಿತು ಎಂದು ಮೀನುಗಾರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…