ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ : ಸಿಎಂ ಬೊಮ್ಮಾಯಿ ಸ್ವಾಗತ – Vishwanews24
ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ : ಸಿಎಂ ಬೊಮ್ಮಾಯಿ ಸ್ವಾಗತ
ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ, ಯಾದಗರಿ, ರಾಯಚೂರು ಹಾಗೂ ಮುಂಬೈ ಕರ್ನಾಟಕದ ವಿಜಯಪುರ ಜಿಲ್ಲೆಗಳ 52,072 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಗಮನಕ್ಕೆ ರಾಷ್ಟ್ರಕೂಟರ ನಾಡು ಮಳಖೇಡ ಸಜ್ಜುಗೊಂಡಿದೆ.
ಕಲಬುರಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಿಸಿದ್ದಾರೆ.
ಅಧಿಕಾರ ನಿರ್ವಹಿಸುವ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿಲ್ಲ: ನ್ಯೂಜಿಲೆಂಡ್ ಪ್ರಧಾನಿ ರಾಜೀನಾಮೆ ಘೋಷಣೆ – Vishwanews24
ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ನೇರವಾಗಿ ಯಾದಗಿರಿ ಜಿಲ್ಲೆಯ ಕೊಡೆಕಲ್ ತೆರಳಿ ನಾರಾಯಣಪುರ ಎಡದಂಡೆ ನಾಲೆ ನವೀಕರಣ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ, ಚೈನೈ-ಸುರತ್ ಗ್ರೀನ್ ಫೀಲ್ಡ್ ರಾಷ್ಟ್ರೀಯ ಹೆದ್ದಾರಿಯ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ನಂತರ ಮಧ್ಯಾಹ್ನ 2 ಗಂಟೆಗೆ ಸೇಡಂ ಜಿಲ್ಲೆಯ ಮಳಖೇಡಗೆ ಆಗಮಿಸಿ, ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆಗೊಂಡ 342 ಗ್ರಾಮಗಳ 52,072 ಜನರಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವರು.
Join our Whatsapp group by clicking the below link 👇👇
