Featured

ವಿಶ್ವಕಪ್ ಕ್ರಿಕೆಟ್ : ಪಾಕಿಸ್ತಾನದ ವಿರುದ್ಧ ಭಾರತ ಪಂದ್ಯ ಬಹಿಷ್ಕರಿಸಿದರೆ ಅದು ಯುದ್ಧವನ್ನು ಮಾಡದೆ ಸೊಲೊಪ್ಪಿಕೊಂಡಂತೆ: ಶಶಿತರೂರ್ – Vishwanews24

ನವದೆಹಲಿ: ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯಗಳನ್ನು ಭಾರತ ತಂಡ ಬಹಿಷ್ಕರಿಸಿದರೆ, ಅದು ಯುದ್ಧವನ್ನೇ ಮಾಡದೆ ಸೊಲೊಪ್ಪಿಕೊಂಡಂತಾಗುತ್ತದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಶಶಿತರೂರ್ ಹೇಳಿದ್ದಾರೆ.
ದೇಶಾದ್ಯಂತ ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೇ ಸಂದರ್ಭದಲ್ಲಿ ಟೀಂ ಇಂಡಿಯಾ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯವನ್ನು ಆಡದೇ ಬಹಿಷ್ಕರಿಸಬೇಕು ಎಂಬ ಆಗ್ರಹಗಳೂ ಕೂಡ ಕೇಳಿಬರುತ್ತಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರು, ರಾಜಕಾರಣಿಗಳು, ಪರ ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದು, ಈ ಪಟ್ಟಿಗೆ ಇದೀಗ ಕಾಂಗ್ರೆಸ್ ಮುಖಂಡ ಶಶಿತರೂರ್ ಅವರೂ ಕೂಡ ಸೇರಿದ್ದಾರೆ.
ಅವರ ಪ್ರಕಾರ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ತಂಡವನ್ನು ಎದುರಿಸಿ ಹೀನಾಯವಾಗಿ ಸೋಲಿಸಬೇಕು. ಆ ಮೂಲಕ ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಕೆ ಮಾಡಬೇಕು ಎಂದು ಹೇಳಿದ್ದಾರೆ. ಇದು ಕೇವಲ 2 ಅಂಕಗಳ ವಿಚಾರವಲ್ಲ. ಬದಲಿಗೆ ಭಾರತದ ಗೌರವದ ಪ್ರಶ್ನೆಯಾಗಿದೆ. ಇದು ಯುದ್ಧವನ್ನೇ ಮಾಡದೇ ಸೋಲು ಒಪ್ಪಿಕೊಂಡಂತಾಗುತ್ತದೆ ಎಂದು ಹೇಳಿದ್ದಾರೆ.
Vishwa News 24

Recent Posts

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

9 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

4 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

4 hours ago