Featured

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ – vishwanews24

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ

ಅಹಮದಾಬಾದ್ : ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್‌ ಗೆದ್ದು, ಕ್ರಿಕೆಟ್‌ ಜಗತ್ತಿನಲ್ಲಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಈ ಎಲ್ಲದರ ನಡುವೆಯೇ ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ ತಂಡದ ಆಟಗಾರನೋರ್ವನ ವಿರುದ್ಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಆಸ್ಟ್ರೇಲಿಯಾ ಆಟಗಾರ ಮಿಚೆಲ್‌ ಮಾರ್ಷ್‌ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸುತ್ತಿದ್ದು, ಟ್ರೋಫಿ ಗೆದ್ದ ಕೆಲವೇ ಗಂಟೆಗಳ ನಂತರ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಈ ಫೋಟೋವನ್ನು ಆರಂಭದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಂತರ ಕಮ್ಮಿನ್ಸ್ ಫೋಟೋ ಶೇರ್ ಮಾಡುತ್ತಿದ್ದಂತೆಯೇ ಇದು ಭಾರೀ ವೈರಲ್ ಆಗಿದ್ದು, ಟ್ರೋಫಿಗೆ ಅಗೌರವ ಸೂಚಿಸಿರುವ ಆಟಗಾರನ ವಿರುದ್ಧ ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇನ್ನು ಈ ಟ್ರೋಫಿಗಾಗಿ ಸಾಕಷ್ಟು ದೇಶಗಳು ಶ್ರಮಪಟ್ಟು ಆಟವಾಡಿವೆ, ಹಾಗೂ ಕೋಟ್ಯಂತರ ಜನರು ಈ ಫೈನಲ್ ಪಂದ್ಯಾವಳಿಯನ್ನು ಕಾತುರದಿಂದ ವೀಕ್ಷಿಸುತ್ತಿದ್ದರು. ಆದರೆ ಈಗ ಆಸ್ಟ್ರೇಲಿಯಾ ಆಟಗಾರ ಕಪ್‌ ಮೇಲೆ ಕಾಲಿಟ್ಟು ಕುಳಿತಿರುವುದು ದುರಂಕಾರದ ವಿಷಯ ಎಂದು ಆಕ್ರೋಶ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago