ನರೇಂದ್ರ ಮೋದಿಯವರು ತಾವು ಅಂದುಕೊಂಡಿದ್ದನ್ನು ಮಾಡಿ ತೋರಿಸುವ ಮನುಷ್ಯ. ಅತ್ಯಂತ ವೇಗದಲ್ಲಿ ಯೋಜನೆಗಳನ್ನು ಪೂರ್ಷಗೊಳಿಸಿ ತನ್ನ ಸಾಮರ್ಥ್ಯವನ್ನು ಅನೇಕ ಬಾರಿ ಸಾಬೀತುಪಡಿಸಿರುವ ನಾಯಕ ನರೇಂದ್ರ ಮೋದಿ. ಒಂದು ಕಾಲದಲ್ಲಿ ಬರಡು ಭೂಮಿಯಾಗಿದ್ದ, ಅತಿವೃಷ್ಟಿ-ಅನಾವೃಷ್ಟಿಗಳಿಂದ ತತ್ತರಿಸಿ ಹೋಗಿದ್ದ ಗುಜರಾತ್ ಅನ್ನು ಅಭಿವೃದ್ಧಿಯ ಶಿಖರಕ್ಕೆ ಏರಿಸಿದ್ದು ಇದೇ ನರೇಂದ್ರ ಮೋದಿ. ಅದರ ಪರಿಣಾಮವಾಗಿಯೇ ಹಲವು ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ಗುಜರಾತ್ ಜನರು ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದರು. ಗುಜರಾತ್ ನ ಅಭಿವೃದ್ಧಿ ಇಡೀ ದೇಶದ ಗಮನ ಸೆಳೆದು, ನಂತರ ಭಾರತದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿ, ಇದೀಗ ಸ್ವತಂತ್ರ ಭಾರತದ ಅತ್ಯಂತ ಶಕ್ತಿಶಾಲಿ ನಾಯಕರಾಗಿ ರೂಪುಗೊಳ್ಳುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ನಾಲ್ಕು ವರ್ಷಗಳಲ್ಲಿ ಈ ಬೃಹತ್ ಏಕತಾ ಪ್ರತಿಮೆಯನ್ನು ಪೂರ್ಣಗೊಳಿಸುವುದಾಗಿ ಯೋಜನೆ ರೂಪಿಸಲಾಗಿತ್ತು. ಆದರೆ ಇದೀಗ ನಲವತ್ತೆರಡು ತಿಂಗಳುಗಳಲ್ಲಿಯೇ ತಲೆ ಎತ್ತಿ ನಿಂತಿದೆ. ಇದೇ ಅಕ್ಟೋಬರ್ ಮೂವತ್ತೊಂದರಂದು ಸರ್ದಾರ್ ಪಟೇಲರ ಜನ್ಮ ದಿನ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಏಕತಾ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಬೃಹತ್ ಪ್ರತಿಮೆಯನ್ನು ಭಾರತದ ಎಲ್ ಅಂಡ್ ಟಿ ಕಂಪನಿ ನಿರ್ಮಿಸಿದೆ. ಒಟ್ಟಾರೆ 600 ಅಡಿಗಳಷ್ಟು ಎತ್ತರವಿದೆ. ಸಾಧು ಬೆಟ್ಟದಲ್ಲಿರುವ ಸರ್ದಾರ್ ಸರೋವರದ ತಟದಲ್ಲಿ ಈ ಐತಿಹಾಸಿಕ ಪ್ರತಿಮೆ ತಲೆ ಎತ್ತಿ ನಿಂತಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಸರ್ದಾರ್ ಪಟೇಲರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಘೋಷಿಸಿದ್ದಾರೆ. ಈ ಬಾರಿಯ ಏಕತಾ ದಿನದಂದು ಈ ಬೃಹತ್ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ. ಭಾರತವನ್ನು ಒಗ್ಗೂಡಿಸಿದ ಮಹಾ ನಾಯಕನ ಪ್ರತಿಮೆ ವಿಶ್ವದ ಅತಿ ದೊಡ್ಡ ಪ್ರತಿಮೆಯಾಗಿ ಹೊರಹೊಮ್ಮಲಿದೆ. ಲಕ್ಷಾಂತರ ಜನ ಪ್ರವಾಸಿಗರನ್ನು ಆಕರ್ಷಿಸಿ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…