ರಾಷ್ಟ್ರ ನ್ಯೂಸ್

ವಿಶ್ವದ ಅತಿ ದೊಡ್ಡ ಪ್ರತಿಮೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್!

ನರೇಂದ್ರ ಮೋದಿಯವರು ತಾವು ಅಂದುಕೊಂಡಿದ್ದನ್ನು ಮಾಡಿ ತೋರಿಸುವ ಮನುಷ್ಯ. ಅತ್ಯಂತ ವೇಗದಲ್ಲಿ ಯೋಜನೆಗಳನ್ನು ಪೂರ್ಷಗೊಳಿಸಿ ತನ್ನ ಸಾಮರ್ಥ್ಯವನ್ನು ಅನೇಕ ಬಾರಿ ಸಾಬೀತುಪಡಿಸಿರುವ ನಾಯಕ ನರೇಂದ್ರ ಮೋದಿ. ಒಂದು ಕಾಲದಲ್ಲಿ ಬರಡು ಭೂಮಿಯಾಗಿದ್ದ, ಅತಿವೃಷ್ಟಿ-ಅನಾವೃಷ್ಟಿಗಳಿಂದ ತತ್ತರಿಸಿ ಹೋಗಿದ್ದ ಗುಜರಾತ್ ಅನ್ನು ಅಭಿವೃದ್ಧಿಯ ಶಿಖರಕ್ಕೆ ಏರಿಸಿದ್ದು ಇದೇ ನರೇಂದ್ರ ಮೋದಿ. ಅದರ ಪರಿಣಾಮವಾಗಿಯೇ ಹಲವು ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ಗುಜರಾತ್ ಜನರು ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದರು. ಗುಜರಾತ್ ನ ಅಭಿವೃದ್ಧಿ ಇಡೀ ದೇಶದ ಗಮನ ಸೆಳೆದು, ನಂತರ ಭಾರತದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿ, ಇದೀಗ ಸ್ವತಂತ್ರ ಭಾರತದ ಅತ್ಯಂತ ಶಕ್ತಿಶಾಲಿ ನಾಯಕರಾಗಿ ರೂಪುಗೊಳ್ಳುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ.ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ಭಾರತದ ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ ವಿಶ್ವದ ಅತಿ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು‌. ಇಡೀ ದೇಶವನ್ನು ಒಗ್ಗೂಡಿಸಿದಂತಹ ದೇಶ ಕಂಡಂತಹ ಸಮರ್ಥ ನಾಯಕ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಹೆಸರನ್ನು ಅಜರಾಮರಗೊಳಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಚಿಸಿದ್ದರು. ಅದಕ್ಕಾಗಿ ದೇಶದ ಮೂಲೆ ಮೂಲೆಗಳಿಂದ ಲೋಹಗಳನ್ನು ಸಂಗ್ರಹಿಸಿದ್ದರು. ಆ ಲೋಹಗಳಿಂದ ಇಂದು ವಿಶ್ವದ ಅತಿ ದೊಡ್ಡ ಪ್ರತಿಮೆ ನಿರ್ಮಾಣವಾಗಿದೆ.

ನಾಲ್ಕು ವರ್ಷಗಳಲ್ಲಿ ಈ ಬೃಹತ್ ಏಕತಾ ಪ್ರತಿಮೆಯನ್ನು ಪೂರ್ಣಗೊಳಿಸುವುದಾಗಿ ಯೋಜನೆ ರೂಪಿಸಲಾಗಿತ್ತು. ಆದರೆ ಇದೀಗ ನಲವತ್ತೆರಡು ತಿಂಗಳುಗಳಲ್ಲಿಯೇ ತಲೆ ಎತ್ತಿ ನಿಂತಿದೆ. ಇದೇ ಅಕ್ಟೋಬರ್ ಮೂವತ್ತೊಂದರಂದು ಸರ್ದಾರ್ ಪಟೇಲರ ಜನ್ಮ ದಿನ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಏಕತಾ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಬೃಹತ್ ಪ್ರತಿಮೆಯನ್ನು ಭಾರತದ ಎಲ್ ಅಂಡ್ ಟಿ ಕಂಪನಿ ನಿರ್ಮಿಸಿದೆ. ಒಟ್ಟಾರೆ 600 ಅಡಿಗಳಷ್ಟು ಎತ್ತರವಿದೆ. ಸಾಧು ಬೆಟ್ಟದಲ್ಲಿರುವ ಸರ್ದಾರ್ ಸರೋವರದ ತಟದಲ್ಲಿ ಈ ಐತಿಹಾಸಿಕ ಪ್ರತಿಮೆ ತಲೆ ಎತ್ತಿ ನಿಂತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಸರ್ದಾರ್ ಪಟೇಲರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಘೋಷಿಸಿದ್ದಾರೆ. ಈ ಬಾರಿಯ ಏಕತಾ ದಿನದಂದು ಈ ಬೃಹತ್ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ. ಭಾರತವನ್ನು ಒಗ್ಗೂಡಿಸಿದ ಮಹಾ ನಾಯಕನ ಪ್ರತಿಮೆ ವಿಶ್ವದ ಅತಿ ದೊಡ್ಡ ಪ್ರತಿಮೆಯಾಗಿ ಹೊರಹೊಮ್ಮಲಿದೆ. ಲಕ್ಷಾಂತರ ಜನ ಪ್ರವಾಸಿಗರನ್ನು ಆಕರ್ಷಿಸಿ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago