ನರೇಂದ್ರ ಮೋದಿಯವರು ತಾವು ಅಂದುಕೊಂಡಿದ್ದನ್ನು ಮಾಡಿ ತೋರಿಸುವ ಮನುಷ್ಯ. ಅತ್ಯಂತ ವೇಗದಲ್ಲಿ ಯೋಜನೆಗಳನ್ನು ಪೂರ್ಷಗೊಳಿಸಿ ತನ್ನ ಸಾಮರ್ಥ್ಯವನ್ನು ಅನೇಕ ಬಾರಿ ಸಾಬೀತುಪಡಿಸಿರುವ ನಾಯಕ ನರೇಂದ್ರ ಮೋದಿ. ಒಂದು ಕಾಲದಲ್ಲಿ ಬರಡು ಭೂಮಿಯಾಗಿದ್ದ, ಅತಿವೃಷ್ಟಿ-ಅನಾವೃಷ್ಟಿಗಳಿಂದ ತತ್ತರಿಸಿ ಹೋಗಿದ್ದ ಗುಜರಾತ್ ಅನ್ನು ಅಭಿವೃದ್ಧಿಯ ಶಿಖರಕ್ಕೆ ಏರಿಸಿದ್ದು ಇದೇ ನರೇಂದ್ರ ಮೋದಿ. ಅದರ ಪರಿಣಾಮವಾಗಿಯೇ ಹಲವು ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ಗುಜರಾತ್ ಜನರು ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದರು. ಗುಜರಾತ್ ನ ಅಭಿವೃದ್ಧಿ ಇಡೀ ದೇಶದ ಗಮನ ಸೆಳೆದು, ನಂತರ ಭಾರತದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿ, ಇದೀಗ ಸ್ವತಂತ್ರ ಭಾರತದ ಅತ್ಯಂತ ಶಕ್ತಿಶಾಲಿ ನಾಯಕರಾಗಿ ರೂಪುಗೊಳ್ಳುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ನಾಲ್ಕು ವರ್ಷಗಳಲ್ಲಿ ಈ ಬೃಹತ್ ಏಕತಾ ಪ್ರತಿಮೆಯನ್ನು ಪೂರ್ಣಗೊಳಿಸುವುದಾಗಿ ಯೋಜನೆ ರೂಪಿಸಲಾಗಿತ್ತು. ಆದರೆ ಇದೀಗ ನಲವತ್ತೆರಡು ತಿಂಗಳುಗಳಲ್ಲಿಯೇ ತಲೆ ಎತ್ತಿ ನಿಂತಿದೆ. ಇದೇ ಅಕ್ಟೋಬರ್ ಮೂವತ್ತೊಂದರಂದು ಸರ್ದಾರ್ ಪಟೇಲರ ಜನ್ಮ ದಿನ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಏಕತಾ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಬೃಹತ್ ಪ್ರತಿಮೆಯನ್ನು ಭಾರತದ ಎಲ್ ಅಂಡ್ ಟಿ ಕಂಪನಿ ನಿರ್ಮಿಸಿದೆ. ಒಟ್ಟಾರೆ 600 ಅಡಿಗಳಷ್ಟು ಎತ್ತರವಿದೆ. ಸಾಧು ಬೆಟ್ಟದಲ್ಲಿರುವ ಸರ್ದಾರ್ ಸರೋವರದ ತಟದಲ್ಲಿ ಈ ಐತಿಹಾಸಿಕ ಪ್ರತಿಮೆ ತಲೆ ಎತ್ತಿ ನಿಂತಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಸರ್ದಾರ್ ಪಟೇಲರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಘೋಷಿಸಿದ್ದಾರೆ. ಈ ಬಾರಿಯ ಏಕತಾ ದಿನದಂದು ಈ ಬೃಹತ್ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ. ಭಾರತವನ್ನು ಒಗ್ಗೂಡಿಸಿದ ಮಹಾ ನಾಯಕನ ಪ್ರತಿಮೆ ವಿಶ್ವದ ಅತಿ ದೊಡ್ಡ ಪ್ರತಿಮೆಯಾಗಿ ಹೊರಹೊಮ್ಮಲಿದೆ. ಲಕ್ಷಾಂತರ ಜನ ಪ್ರವಾಸಿಗರನ್ನು ಆಕರ್ಷಿಸಿ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…