ನರೇಂದ್ರ ಮೋದಿಯವರು ತಾವು ಅಂದುಕೊಂಡಿದ್ದನ್ನು ಮಾಡಿ ತೋರಿಸುವ ಮನುಷ್ಯ. ಅತ್ಯಂತ ವೇಗದಲ್ಲಿ ಯೋಜನೆಗಳನ್ನು ಪೂರ್ಷಗೊಳಿಸಿ ತನ್ನ ಸಾಮರ್ಥ್ಯವನ್ನು ಅನೇಕ ಬಾರಿ ಸಾಬೀತುಪಡಿಸಿರುವ ನಾಯಕ ನರೇಂದ್ರ ಮೋದಿ. ಒಂದು ಕಾಲದಲ್ಲಿ ಬರಡು ಭೂಮಿಯಾಗಿದ್ದ, ಅತಿವೃಷ್ಟಿ-ಅನಾವೃಷ್ಟಿಗಳಿಂದ ತತ್ತರಿಸಿ ಹೋಗಿದ್ದ ಗುಜರಾತ್ ಅನ್ನು ಅಭಿವೃದ್ಧಿಯ ಶಿಖರಕ್ಕೆ ಏರಿಸಿದ್ದು ಇದೇ ನರೇಂದ್ರ ಮೋದಿ. ಅದರ ಪರಿಣಾಮವಾಗಿಯೇ ಹಲವು ವರ್ಷಗಳ ಕಾಲ ಮುಖ್ಯಮಂತ್ರಿಯನ್ನಾಗಿ ಗುಜರಾತ್ ಜನರು ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದರು. ಗುಜರಾತ್ ನ ಅಭಿವೃದ್ಧಿ ಇಡೀ ದೇಶದ ಗಮನ ಸೆಳೆದು, ನಂತರ ಭಾರತದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿ, ಇದೀಗ ಸ್ವತಂತ್ರ ಭಾರತದ ಅತ್ಯಂತ ಶಕ್ತಿಶಾಲಿ ನಾಯಕರಾಗಿ ರೂಪುಗೊಳ್ಳುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ನಾಲ್ಕು ವರ್ಷಗಳಲ್ಲಿ ಈ ಬೃಹತ್ ಏಕತಾ ಪ್ರತಿಮೆಯನ್ನು ಪೂರ್ಣಗೊಳಿಸುವುದಾಗಿ ಯೋಜನೆ ರೂಪಿಸಲಾಗಿತ್ತು. ಆದರೆ ಇದೀಗ ನಲವತ್ತೆರಡು ತಿಂಗಳುಗಳಲ್ಲಿಯೇ ತಲೆ ಎತ್ತಿ ನಿಂತಿದೆ. ಇದೇ ಅಕ್ಟೋಬರ್ ಮೂವತ್ತೊಂದರಂದು ಸರ್ದಾರ್ ಪಟೇಲರ ಜನ್ಮ ದಿನ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಏಕತಾ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಬೃಹತ್ ಪ್ರತಿಮೆಯನ್ನು ಭಾರತದ ಎಲ್ ಅಂಡ್ ಟಿ ಕಂಪನಿ ನಿರ್ಮಿಸಿದೆ. ಒಟ್ಟಾರೆ 600 ಅಡಿಗಳಷ್ಟು ಎತ್ತರವಿದೆ. ಸಾಧು ಬೆಟ್ಟದಲ್ಲಿರುವ ಸರ್ದಾರ್ ಸರೋವರದ ತಟದಲ್ಲಿ ಈ ಐತಿಹಾಸಿಕ ಪ್ರತಿಮೆ ತಲೆ ಎತ್ತಿ ನಿಂತಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಸರ್ದಾರ್ ಪಟೇಲರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಘೋಷಿಸಿದ್ದಾರೆ. ಈ ಬಾರಿಯ ಏಕತಾ ದಿನದಂದು ಈ ಬೃಹತ್ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ. ಭಾರತವನ್ನು ಒಗ್ಗೂಡಿಸಿದ ಮಹಾ ನಾಯಕನ ಪ್ರತಿಮೆ ವಿಶ್ವದ ಅತಿ ದೊಡ್ಡ ಪ್ರತಿಮೆಯಾಗಿ ಹೊರಹೊಮ್ಮಲಿದೆ. ಲಕ್ಷಾಂತರ ಜನ ಪ್ರವಾಸಿಗರನ್ನು ಆಕರ್ಷಿಸಿ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…