ನವದೆಹಲಿ: ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಮೂಲದ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.
ಬರೊಬ್ಬರಿ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’, ಬ್ರಿಟನ್ ಮೂಲದ ಇನ್ ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್ ಸಂಸ್ಥೆಯ ಪ್ರಶಸ್ತಿ ಪಟ್ಟಿಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದು, ಈ ಸಂಸ್ಥೆ 2019ನೇ ಸಾಲಿಗೆ ನೀಡುವ ‘ದಿ ಸ್ಟ್ರಕ್ಚರಲ್ ಅವಾರ್ಡ್ಸ್’ಗೆ ಈ ಪ್ರತಿಮೆ ಕೂಡ ನಾಮನಿರ್ದೇಶನವಾಗಿದೆ.
ಇನ್ ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್ ಸಂಸ್ಥೆಯು ವಿಶ್ವದ ಅತ್ಯುತ್ತಮ ರಚನೆಗಳಿಗೆ ಕಳೆದ 52 ವರ್ಷಗಳಿಂದ ಈ ಸಂಸ್ಥೆ ಪ್ರಶಸ್ತಿ ನೀಡುತ್ತಿದೆ.
ಮುಂಬರುವ ನವೆಂಬರ್ 15ಕ್ಕೆ ಲಂಡನ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಘೋಷಣೆಯಾಗಲಿದೆ.
ಏಕತಾ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್ನಿಂದ 3.2 ಕಿ.ಮೀ ದೂರದಲ್ಲಿರುವ ‘ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭ್ಭಾಯಿ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಅನಾವರಣ ಮಾಡಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…