Featured

ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಪ್ರಶಸ್ತಿಗೆ ನಾಮ ನಿರ್ದೇಶನ -Vishwanews24

ನವದೆಹಲಿ: ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಮೂಲದ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

ಬರೊಬ್ಬರಿ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’, ಬ್ರಿಟನ್ ಮೂಲದ ಇನ್ ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್‌ ಸಂಸ್ಥೆಯ ಪ್ರಶಸ್ತಿ ಪಟ್ಟಿಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದು, ಈ ಸಂಸ್ಥೆ 2019ನೇ ಸಾಲಿಗೆ ನೀಡುವ ‘ದಿ ಸ್ಟ್ರಕ್ಚರಲ್ ಅವಾರ್ಡ್ಸ್‌’ಗೆ ಈ ಪ್ರತಿಮೆ ಕೂಡ ನಾಮನಿರ್ದೇಶನವಾಗಿದೆ.

ಇನ್‌ ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್‌ ಸಂಸ್ಥೆಯು ವಿಶ್ವದ ಅತ್ಯುತ್ತಮ ರಚನೆಗಳಿಗೆ ಕಳೆದ 52 ವರ್ಷಗಳಿಂದ ಈ ಸಂಸ್ಥೆ ಪ್ರಶಸ್ತಿ ನೀಡುತ್ತಿದೆ.

ಮುಂಬರುವ ನವೆಂಬರ್ 15ಕ್ಕೆ ಲಂಡನ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಘೋಷಣೆಯಾಗಲಿದೆ.

ಏಕತಾ ಪ್ರತಿಮೆ ಅಹಮದಾಬಾದ್ ನಿಂದ 200 ಕಿ.ಮೀ ದೂರದಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಾಣವಾಗಿದೆ. ನರ್ಮದಾ ಜಿಲ್ಲೆಯ ನರ್ಮದಾ ಡ್ಯಾಮ್‍ನಿಂದ 3.2 ಕಿ.ಮೀ ದೂರದಲ್ಲಿರುವ ‘ಸಾಧು ಬೆಟ್’ ದ್ವೀಪದಲ್ಲಿ ಯೋಜನಾ ಸ್ಥಳವಿದೆ. ಅಕ್ಟೋಬರ್ 31ರಂದು ಸರ್ದಾರ್ ವಲ್ಲಭ್‍ಭಾಯಿ ಪಟೇಲ್ ಅವರ ಜನ್ಮದಿನ. ಹೀಗಾಗಿ ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ಅನಾವರಣ ಮಾಡಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago