ಮುಂಬೈ; ಮುಖೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ವಿಶ್ವದ ಅಮೂಲ್ಯ ಸಂಸ್ಥೆಗಳ ಲೀಗ್ನ ಅಗ್ರ 40 ಸ್ಥಾನವನ್ನು ಪ್ರವೇಶಿಸಿದೆ. ಅಲ್ಲದೆ 210 ಬಿಲಿಯನ್ ಅಮೆರಿಕನ್ ಡಾಲರ್ನಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಮೊದಲ ಭಾರತೀಯ ಕಂಪೆನಿ ಎಂಬ ಹಿರಿಮೆಗೂ ರಿಲಾಯನ್ಸ್ ಪಾತ್ರವಾಗಿದೆ.
ಗುರುವಾರದ ಷೇರು ಮಾರುಕಟ್ಟೆಯಲ್ಲಿ ಆರ್ಐಎಲ್ ಸ್ಕ್ರಿಪ್ಟ್ ರೋಸ್ ಸಾರ್ವಕಾಲಿಕ ದಾಖಲೆಯ ಗರಿಷ್ಠ 2,344.95 ಮಟ್ಟವನ್ನು ತಲುಪಿತ್ತು. ಇನ್ನೂ ಎನ್ಎಸ್ಇ ಇಂಟ್ರಾ ಸಹ ದಾಖಲೆಯ ಏರಿಕೆ ಕಂಡಿದ್ದು, 2,319 ರೂ ಗೆ ತನ್ನ ದಿನದ ವಹಿವಾಟನ್ನು ಮುಗಿಸಿದ್ದು ಶೇ. 7.29 ರಷ್ಟು ಲಾಭವನ್ನು ದಾಖಲಿಸಿತ್ತು.
ರಿಲಾಯನ್ಸ್ ಪಿಪಿ ಸ್ಕ್ರಿಪ್ಟ್ ಎನ್ಎಸ್ಇಯಲ್ಲಿ ಶೇ.10 ರಷ್ಟು ಹೆಚ್ಚುವರಿ ಗಳಿಕೆ ಸಾಧಿಸುವ ಮೂಲಕ ಮಾರುಕಟ್ಟೆ ವಹಿವಾಟು ಅಂತ್ಯದ ವೇಳೆಗೆ ಸಾರ್ವಕಾಲಿಕ 1,393.7 ಕ್ಕೆ ತಲುಪಿದೆ. ಪರಿಣಾಮ ರಿಲಾಯನ್ಸ್ ಕಂಪನಿಯ ಮಾರುಕಟ್ಟೆಯ ಒಟ್ಟು ಬಂಡವಾಳೀಕರಣ 15.45 ಲಕ್ಷ ಕೋಟಿ ರೂ.ಗೆ ಅಥವಾ 210 ಬಿಲಿಯನ್ ಯುಎಸ್ ಡಾಲರ್ಗೆ ಏರಿದಂತಾಗಿದೆ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ.
ಮಾರುಕಟ್ಟೆ ಮುಕ್ತಾಯದ ಸಮಯದಲ್ಲಿ, ಆರ್ಐಎಲ್ಎಂ-ಕ್ಯಾಪ್ 208.3 ಬಿಲಿಯನ್ ಯುಎಸ್ ಡಾಲರ್ ಆಗಿದೆ. ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ಯಾವುದೇ ಭಾರತೀಯ ಕಂಪನಿಯು 200 ಬಿಲಿಯನ್ ಯುಎಸ್ ಮಾರುಕಟ್ಟೆ ಬಂಡವಾಳೀಕರಣದ ಮೈಲಿಗಲ್ಲು ದಾಟಿರುವುದು ಇದೇ ಮೊದಲು ಎನ್ನಲಾಗುತ್ತಿದೆ.
ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ರಿಲಯನ್ಸ್ ಇಂಡಸ್ಟ್ರೀಸ್ ಪ್ರಸ್ತುತ ವಿಶ್ವದ 40 ನೇ ಅಮೂಲ್ಯ ಸಂಸ್ಥೆಯಾಗಿದ್ದು, ಎಕ್ಸಾನ್ ಮೊಬಿಲ್, ಪೆಪ್ಸಿಕೋ, ಎಸ್ಎಪಿ, ಒರಾಕಲ್, ಫಿಜರ್ ಮತ್ತು ನೊವಾರ್ಟಿಸ್ ಸೇರಿದಂತೆ ಹಲವು ಕಂಪನಿಗಳನ್ನು ಹಿಂದಿಕ್ಕಿ ಮುಂದಕ್ಕೆ ಚಲಿಸಿದೆ. ಅಲ್ಲದೆ, ಆರ್ಐಎಲ್ ಏಷ್ಯಾದ ಟಾಪ್ 10 ಅತ್ಯಮೂಲ್ಯ ಕಂಪನಿಗಳಲ್ಲಿ ಒಂದಾಗಿಯೂ ಗುರುತಿಸಿಕೊಂಡಿದೆ.
ಇದೀಗ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ರಿಟೇಲ್ ಉದ್ಯಮದ ಸುಮಾರು 1.47 ಲಕ್ಷ ಕೋಟಿ ರೂಪಾಯಿಗಳ ಪಾಲನ್ನು ಇ-ಕಾಮರ್ಸ್ ದಿಗ್ಗಜ ಕಂಪನಿ ಅಮೆಜಾನ್ ಗೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಿಲಯನ್ಸ್ ಶೇರುಗಳಲ್ಲಿ ಶೇಕಡಾ 7ರಷ್ಟು ಏರಿಕೆ ಕಂಡುಬಂದಿದೆ. ಜೊತೆಗೆ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ 200 ಬಿಲಿಯನ್ ಡಾಲರ್ ಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ ಭಾರತದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…