Featured

ವಿಶ್ವದ ಅಮೂಲ್ಯ ಸಂಸ್ಥೆಗಳ ಲೀಗ್‌ನ ಅಗ್ರ 40 ಸ್ಥಾನವನ್ನು ಪ್ರವೇಶಿಸಿದ ರಿಲಾಯನ್ಸ್ -Vishwanews24

ವಿಶ್ವದ ಅಮೂಲ್ಯ ಸಂಸ್ಥೆಗಳ ಲೀಗ್‌ನ ಅಗ್ರ 40 ಸ್ಥಾನವನ್ನು ಪ್ರವೇಶಿಸಿದ ರಿಲಾಯನ್ಸ್‌: ಮುಕೇಶ್ ಅಂಬಾನಿ ಈಗ ವಿಶ್ವದ 5ನೇ ಶ್ರೀಮಂತ -Vishwanews24

ಮುಂಬೈ; ಮುಖೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್‌) ವಿಶ್ವದ ಅಮೂಲ್ಯ ಸಂಸ್ಥೆಗಳ ಲೀಗ್‌ನ ಅಗ್ರ 40 ಸ್ಥಾನವನ್ನು ಪ್ರವೇಶಿಸಿದೆ. ಅಲ್ಲದೆ 210 ಬಿಲಿಯನ್ ಅಮೆರಿಕನ್ ಡಾಲರ್‌ನಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಮೊದಲ ಭಾರತೀಯ ಕಂಪೆನಿ ಎಂಬ ಹಿರಿಮೆಗೂ ರಿಲಾಯನ್ಸ್ ಪಾತ್ರವಾಗಿದೆ.

ಗುರುವಾರದ ಷೇರು ಮಾರುಕಟ್ಟೆಯಲ್ಲಿ ಆರ್‌ಐಎಲ್‌ ಸ್ಕ್ರಿಪ್ಟ್ ರೋಸ್ ಸಾರ್ವಕಾಲಿಕ ದಾಖಲೆಯ ಗರಿಷ್ಠ 2,344.95 ಮಟ್ಟವನ್ನು ತಲುಪಿತ್ತು. ಇನ್ನೂ ಎನ್‌ಎಸ್‌ಇ ಇಂಟ್ರಾ ಸಹ ದಾಖಲೆಯ ಏರಿಕೆ ಕಂಡಿದ್ದು, 2,319 ರೂ ಗೆ ತನ್ನ ದಿನದ ವಹಿವಾಟನ್ನು ಮುಗಿಸಿದ್ದು ಶೇ. 7.29 ರಷ್ಟು ಲಾಭವನ್ನು ದಾಖಲಿಸಿತ್ತು.

ರಿಲಾಯನ್ಸ್ ಪಿಪಿ ಸ್ಕ್ರಿಪ್ಟ್ ಎನ್‌ಎಸ್‌ಇಯಲ್ಲಿ ಶೇ.10 ರಷ್ಟು ಹೆಚ್ಚುವರಿ ಗಳಿಕೆ ಸಾಧಿಸುವ ಮೂಲಕ ಮಾರುಕಟ್ಟೆ ವಹಿವಾಟು ಅಂತ್ಯದ ವೇಳೆಗೆ ಸಾರ್ವಕಾಲಿಕ 1,393.7 ಕ್ಕೆ ತಲುಪಿದೆ. ಪರಿಣಾಮ ರಿಲಾಯನ್ಸ್ ಕಂಪನಿಯ ಮಾರುಕಟ್ಟೆಯ ಒಟ್ಟು ಬಂಡವಾಳೀಕರಣ 15.45 ಲಕ್ಷ ಕೋಟಿ ರೂ.ಗೆ ಅಥವಾ 210 ಬಿಲಿಯನ್ ಯುಎಸ್ ಡಾಲರ್‌ಗೆ ಏರಿದಂತಾಗಿದೆ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆ ಮುಕ್ತಾಯದ ಸಮಯದಲ್ಲಿ, ಆರ್‌ಐಎಲ್‌ಎಂ-ಕ್ಯಾಪ್ 208.3 ಬಿಲಿಯನ್ ಯುಎಸ್ ಡಾಲರ್ ಆಗಿದೆ. ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ಯಾವುದೇ ಭಾರತೀಯ ಕಂಪನಿಯು 200 ಬಿಲಿಯನ್ ಯುಎಸ್ ಮಾರುಕಟ್ಟೆ ಬಂಡವಾಳೀಕರಣದ ಮೈಲಿಗಲ್ಲು ದಾಟಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ರಿಲಯನ್ಸ್ ಇಂಡಸ್ಟ್ರೀಸ್ ಪ್ರಸ್ತುತ ವಿಶ್ವದ 40 ನೇ ಅಮೂಲ್ಯ ಸಂಸ್ಥೆಯಾಗಿದ್ದು, ಎಕ್ಸಾನ್ ಮೊಬಿಲ್, ಪೆಪ್ಸಿಕೋ, ಎಸ್‌ಎಪಿ, ಒರಾಕಲ್, ಫಿಜರ್ ಮತ್ತು ನೊವಾರ್ಟಿಸ್ ಸೇರಿದಂತೆ ಹಲವು ಕಂಪನಿಗಳನ್ನು ಹಿಂದಿಕ್ಕಿ ಮುಂದಕ್ಕೆ ಚಲಿಸಿದೆ. ಅಲ್ಲದೆ, ಆರ್‌ಐಎಲ್‌ ಏಷ್ಯಾದ ಟಾಪ್ 10 ಅತ್ಯಮೂಲ್ಯ ಕಂಪನಿಗಳಲ್ಲಿ ಒಂದಾಗಿಯೂ ಗುರುತಿಸಿಕೊಂಡಿದೆ.

ಇದೀಗ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ರಿಟೇಲ್ ಉದ್ಯಮದ ಸುಮಾರು 1.47 ಲಕ್ಷ ಕೋಟಿ ರೂಪಾಯಿಗಳ ಪಾಲನ್ನು ಇ-ಕಾಮರ್ಸ್ ದಿಗ್ಗಜ ಕಂಪನಿ ಅಮೆಜಾನ್ ಗೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಿಲಯನ್ಸ್ ಶೇರುಗಳಲ್ಲಿ ಶೇಕಡಾ 7ರಷ್ಟು ಏರಿಕೆ ಕಂಡುಬಂದಿದೆ. ಜೊತೆಗೆ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ 200 ಬಿಲಿಯನ್ ಡಾಲರ್ ಗಿಂತ ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ ಭಾರತದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

17 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

17 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

17 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

17 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

17 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

18 hours ago