Featured

ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ -Vishwanews24

ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ -Vishwanews24

ಕೊರೊನಾ ಬಿಕ್ಕಟ್ಟು ಅತ್ಯಂತ ಯಶಸ್ವಿ ನಿರ್ವಹಣೆ..

ನವದೆಹಲಿ: ಅಮೇರಿಕಾದ ಕಂಪನಿಯೊಂದು ವಿಶ್ವದ ನಾಯಕರ ಜನಪ್ರಿಯತೆಗೆ ಸಂಬಂಧಿಸಿದಂತೆ ನಡೆಸಿದ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದ ಇತರೆ ನಾಯಕರಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ರೇಟಿಂಗ್ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ, “ಬೇರೆ ದೇಶಗಳಿಗೆ ಹೋಲಿಸಿದರೆ ಕೊರೊನಾ ಬಿಕ್ಕಟ್ಟನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿರುವುದು ಸೇರಿದಂತೆ ಹಲವು ವಿಷಯಗಳಲ್ಲಿ ಅವರು ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ್ದಾರೆ” ಎಂದರು.

“ಮೋದಿ ಅವರು ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಜನಪ್ರಿಯ ನಾಯಕರಾಗಿದ್ದಾರೆ, ಅವರಲ್ಲಿರುವ ಸಮರ್ಪಣಾ ಮನೋಭಾವದಿಂದಾಗಿಯೇ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಅಮೇರಿಕಾದ ಕಂಪನಿ ಮಾರ್ನಿಂಗ್ ಕನ್ಸಲ್ಟ್‌, ವಿಶ್ವದ ನಾಯಕರ ಕುರಿತು ನಿರಂತರವಾಗಿ ಸಮೀಕ್ಷೆ ನಡೆಸುತ್ತಿದ್ದು, ಈ ಬಾರಿಯ ಸಮೀಕ್ಷೆಯಲ್ಲಿ ಶೇ 75ರಷ್ಟು ಮಂದಿ ಮೋದಿ ಅವರ ಕಾರ್ಯನಿರ್ವಹಣೆ ಮತ್ತು ನಾಯಕತ್ವದ ಬಗ್ಗೆ ಒಲವು ತೋರಿದ್ದು, ಶೇ 25ರಷ್ಟು ಮಂದಿ ಅವರ ನಾಯಕತ್ವವನ್ನು ಇಷ್ಟಪಟ್ಟಿಲ್ಲ. ಇದು ವಿಶ್ವದ ಬೇರೆ ಬೇರೆ ದೇಶದ ನಾಯಕರಿಗೆ ದೊರೆತಿರುವ ರೇಟಿಂಗ್‌ಗಿಂತ ಹೆಚ್ಚಿದೆ ಎಂದು ಸಮೀಕ್ಷೆ ತಿಳಿಸಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago