ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ -Vishwanews24

ನ್ಯೂಯಾರ್ಕ್: ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಒಬ್ಬರೀಂದು ಖ್ಯಾತ ನಿಯತಕಾಲಿಕೆ ಫೋರ್ಬ್ಸ್‌ ಪಟ್ಟಿ ಹೇಳಿದೆ.  ಫೋರ್ಬ್ಸ್‌ ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್‌ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ  ಕಿರಣ್ ಮಜುಂದಾರ್ ಶಾ ಇದ್ದಾರೆ.

ಫೋರ್ಬ್ಸ್ 2019 ರ “ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ” ಪಟ್ಟಿಯಲ್ಲಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅಗ್ರಸ್ಥಾನದಲ್ಲಿದ್ದರೆ, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಾಗಾರ್ಡ್ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ  ತೃತೀಯ ಸ್ಥಾನದಲ್ಲಿದ್ದಾರೆ.

ಪಟ್ಟಿಯಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ (29) ಸಹ ಇದ್ದು “2019 ರಲ್ಲಿ, ವಿಶ್ವದಾದ್ಯಂತ ಮಹಿಳೆಯರು ಸರ್ಕಾರ, ವ್ಯವಹಾರ, ಲೋಕೋಪಕಾರ ಮತ್ತು ಮಾಧ್ಯಮಗಳಲ್ಲಿ ಮುಖ್ಯ ಸ್ಥಾನಗಳನ್ನು ಪಡೆದುಕೊಂಡುಉತ್ತಮ ಸಾಧನೆ ಮಾಡುತ್ತಿದ್ದಾರೆ” ಎಂದು ಫೋರ್ಬ್ಸ್ ಹೇಳಿದೆ.

ಫೋರ್ಬ್ಸ್ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಸೀತಾರಾಮನ್ 34 ನೇ ಸ್ಥಾನದಲ್ಲಿದ್ದಾರೆ. ಇವರು ಪಟ್ಟಿಯಲ್ಲಿರುವ ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಭಾರತದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿರುವ ಸೀತಾರಾಮನ್ ದೇಶದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇನ್ನು  ನಾಡರ್ ಮಲ್ಹೋತ್ರಾ (54), ಕಿರಣ್ ಮಜುಂದಾರ್ ಶಾ(65) ಸ್ಥಾನದಲ್ಲಿದ್ದಾರೆ. ಮಲ್ಹೋತ್ರಾ ಎಚ್‌ಸಿಎಲ್ ಕಾರ್ಪೊರೇಶನ್‌ನ ಸಿಇಒ ಆಗಿ, 8.9 ಬಿಲಿಯನ್ ಯುಎಸ್ಡಿ ತಂತ್ರಜ್ಞಾನ ಕಂಪನಿಯ ಎಲ್ಲಾ ಕಾರ್ಯತಂತ್ರದ ಭಾಗವಾಗಿ ದುಡಿಯುತ್ತಿದ್ದರೆ ಮಜುಂದಾರ್ ಶಾಭಾರತದ ಅತ್ಯಂತ ಶ್ರೀಮಂತ ಸ್ವಂತ ಉದ್ಯಮ ನಡೆಸುವ ಮಹಿಳೆ ಮತ್ತು 1978 ರಲ್ಲಿ ದೇಶದ ಅತಿದೊಡ್ಡ ಜೈವಿಕ ಔಷಧೀಯ  ಸಂಸ್ಥೆ ಬಯೋಕಾನ್ ಸ್ಥಾಪನೆ ಮಾಡಿದ್ದವರು ಎನ್ನುವುದು ಗಮನೀಯ ಅಂಶ.

ಉಳಿದಂತೆ ಫೋರ್ಬ್ಸ್ ಪಟ್ಟಿಯಲ್ಲಿ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಹ-ಅಧ್ಯಕ್ಷ ಮೆಲಿಂಡಾ ಗೇಟ್ಸ್ (6), ಐಬಿಎಂ ಸಿಇಒ ಗಿನ್ನಿ ರೊಮೆಟ್ಟಿ (9), ಫೇಸ್‌ಬುಕ್ ಸಿಒಒ ಶೆರಿಲ್ ಸ್ಯಾಂಡ್‌ಬರ್ಗ್ (18), ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ (38), ಮೊದಲ ಮಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರ ಇವಾಂಕಾ ಟ್ರಂಪ್ (42), ಗಾಯಕರಾದ ರಿಹಾನ್ನಾ (61), ಬೆಯೋನ್ಸ್ (66) ಮತ್ತು ಟೇಲರ್ ಸ್ವಿಫ್ಟ್ (71), ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ (81) ಮತ್ತು ಯುವ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ (100). ಸ್ಥಾನ ಗಳಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago