ನ್ಯೂಯಾರ್ಕ್: ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಒಬ್ಬರೀಂದು ಖ್ಯಾತ ನಿಯತಕಾಲಿಕೆ ಫೋರ್ಬ್ಸ್ ಪಟ್ಟಿ ಹೇಳಿದೆ. ಫೋರ್ಬ್ಸ್ ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಇದ್ದಾರೆ.
ಫೋರ್ಬ್ಸ್ 2019 ರ “ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ” ಪಟ್ಟಿಯಲ್ಲಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅಗ್ರಸ್ಥಾನದಲ್ಲಿದ್ದರೆ, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಾಗಾರ್ಡ್ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೃತೀಯ ಸ್ಥಾನದಲ್ಲಿದ್ದಾರೆ.
ಫೋರ್ಬ್ಸ್ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗಿರುವ ಸೀತಾರಾಮನ್ 34 ನೇ ಸ್ಥಾನದಲ್ಲಿದ್ದಾರೆ. ಇವರು ಪಟ್ಟಿಯಲ್ಲಿರುವ ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಭಾರತದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿರುವ ಸೀತಾರಾಮನ್ ದೇಶದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇನ್ನು ನಾಡರ್ ಮಲ್ಹೋತ್ರಾ (54), ಕಿರಣ್ ಮಜುಂದಾರ್ ಶಾ(65) ಸ್ಥಾನದಲ್ಲಿದ್ದಾರೆ. ಮಲ್ಹೋತ್ರಾ ಎಚ್ಸಿಎಲ್ ಕಾರ್ಪೊರೇಶನ್ನ ಸಿಇಒ ಆಗಿ, 8.9 ಬಿಲಿಯನ್ ಯುಎಸ್ಡಿ ತಂತ್ರಜ್ಞಾನ ಕಂಪನಿಯ ಎಲ್ಲಾ ಕಾರ್ಯತಂತ್ರದ ಭಾಗವಾಗಿ ದುಡಿಯುತ್ತಿದ್ದರೆ ಮಜುಂದಾರ್ ಶಾಭಾರತದ ಅತ್ಯಂತ ಶ್ರೀಮಂತ ಸ್ವಂತ ಉದ್ಯಮ ನಡೆಸುವ ಮಹಿಳೆ ಮತ್ತು 1978 ರಲ್ಲಿ ದೇಶದ ಅತಿದೊಡ್ಡ ಜೈವಿಕ ಔಷಧೀಯ ಸಂಸ್ಥೆ ಬಯೋಕಾನ್ ಸ್ಥಾಪನೆ ಮಾಡಿದ್ದವರು ಎನ್ನುವುದು ಗಮನೀಯ ಅಂಶ.
ಉಳಿದಂತೆ ಫೋರ್ಬ್ಸ್ ಪಟ್ಟಿಯಲ್ಲಿ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ನ ಸಹ-ಅಧ್ಯಕ್ಷ ಮೆಲಿಂಡಾ ಗೇಟ್ಸ್ (6), ಐಬಿಎಂ ಸಿಇಒ ಗಿನ್ನಿ ರೊಮೆಟ್ಟಿ (9), ಫೇಸ್ಬುಕ್ ಸಿಒಒ ಶೆರಿಲ್ ಸ್ಯಾಂಡ್ಬರ್ಗ್ (18), ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ (38), ಮೊದಲ ಮಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರ ಇವಾಂಕಾ ಟ್ರಂಪ್ (42), ಗಾಯಕರಾದ ರಿಹಾನ್ನಾ (61), ಬೆಯೋನ್ಸ್ (66) ಮತ್ತು ಟೇಲರ್ ಸ್ವಿಫ್ಟ್ (71), ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ (81) ಮತ್ತು ಯುವ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ (100). ಸ್ಥಾನ ಗಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…