ಮೈಸೂರು: ಎಚ್.ವಿಶ್ವನಾಥ್ ರಾಜಕಾರಣದ ವ್ಯಭಿಚಾರಿ. ಆಮಿಷಕ್ಕೊಳಗಾಗಿ ಪಕ್ಷ ಬದಲಿಸುವುದು ರಾಜಕಾರಣದ ವ್ಯಭಿಚಾರ” ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಶ್ವನಾಥ್ ಅವರನ್ನು ನಾನೇ ಜೆಡಿಎಸ್ ಗೆ ಕರೆ ತಂದು ನಮ್ಮ ಪಕ್ಷಕ್ಕೆ ವಿಷ ಹಾಕಿಬಿಟ್ಟೆ. ಸದನದಲ್ಲಿ ನಾನು ಅವರ ವಿರುದ್ಧ ಮಾತಾಡಿದ್ದಕ್ಕೆ ಈಗಲೂ ಬದ್ಧನಾಗಿದ್ದೇನೆ. ಅವರ ಜೊತೆ ಚರ್ಚೆಗೆ ಬರಲು, ದೇವಸ್ಥಾನಕ್ಕೆ ಹೋಗಲು ನಾನು ಸದಾ ಸಿದ್ಧ. ಅವರ ಜೊತೆಯೇ ಕೂತು ಅವರ ಇನ್ನಷ್ಟು ಚರಿತ್ರೆ ಬಿಚ್ಚಿಡುತ್ತೇನೆ.
ಹಕ್ಕಿ ಒಂದೊಂದು ಋತುವಿನಲ್ಲಿ ಒಂದೊಂದು ಗೂಡು ಸೇರುತ್ತದೆ. ಒಂದು ಋತುವಿನಲ್ಲಿ ವಲಸೆ ಹೋಗುತ್ತದೆ.ಲಾಭ ಎಲ್ಲಿರುತ್ತೋ ಅಲ್ಲಿಗೆ ವಲಸೆ ಹೋಗುತ್ತದೆ. ಹಾಗೇ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಕೂಡ ಎಂದರು.
ನಮ್ಮ ಪಕ್ಷದವರೇ ನನ್ನನ್ನು ವಿರೋಧಿಸಿದರೂ ಕೆ.ಆರ್ ನಗರ ಕ್ಷೇತ್ರದ ಜನತೆ ನನ್ನನ್ನು ಗೆಲ್ಲಿಸಿದರು. ದೇವೇಗೌಡರಿಗೆ, ಜೆಡಿಎಸ್ ಗೆ ವಿಷ ಹಾಕಿದವರು ಬಹಳ ಜನ ಇದ್ದಾರೆ. ವಿಶ್ವನಾಥ್ ಪಕ್ಷಕ್ಕೆ ಕಾರ್ಕೋಟ ವಿಷ ಹಾಕಿದ್ದಾರೆ, ಅದನ್ನೆಲ್ಲ ಜೀರ್ಣಿಸಿಕೊಳ್ಳುವ ಶಕ್ತಿ ನಮ್ಮ ನಾಯಕರಿಗೆ ಪಕ್ಷಕ್ಕೆ ಇದೆ.
ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಬೇಕಾದರೂ ಬರ್ತಿನಿ. ಬಹಿರಂಗ ಚರ್ಚೆಗೂ ನಾನು ಸಿದ್ಧ. ನಾನು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ. ಪಕ್ಷಕ್ಕೆ ಮೋಸ ಮಾಡಿ ಹೋಗಿಲ್ಲ. ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡ್ತೀರಾ? ನಿಮಗೆ ಆ ಧೈರ್ಯ ಇದ್ದರೆ ಬನ್ನಿ ಪ್ರಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…