Featured

ವಿಶ್ವನಾಯಕ ಪ್ರಧಾನಿ ಮೋದಿಯವರ ಬಗ್ಗೆ ಮಾತಾಡೋಕ್ಕೆ ನಿಮಗೆ ಯಾವುದೇ ನೈತಿಕತೆ ಇಲ್ಲ : ರಮ್ಯಾಗೆ ಬುಲೆಟ್ ಪ್ರಕಾಶ್ -Vishwanews24

ಬೆಂಗಳೂರು, ,: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ನಟಿ ರಮ್ಯಾರನ್ನು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌ಗೆ ಹೋಲಿಸುವಂತೆ ಫೋಟೊ ಸಹಿತ ಟ್ವೀಟ್‌ ಮಾಡಿರುವ ರಮ್ಯಾ ನೆಟ್ಟಿಗರ ಕೋಪಕ್ಕೆ ಗುರಿಯಾಗಿದ್ದಾರೆ. ರಮ್ಯಾ, ಹಲವು ಬಾರಿ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈಗ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಮಗುವೊಂದರ ಎರಡೂ ಕಿವಿ ಹಿಡಿದೆಳೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರ ಪಕ್ಕದಲ್ಲೆ ಪ್ರಧಾನಿ ಮೋದಿ ಕೂಡ ಮಗುವಿನ ಕಿವಿ ಎಳೆಯುತ್ತಿರುವ ಫೋಟೊ ಅಪ್‌ಲೋಡ್‌ ಮಾಡಿದ್ದಾರೆ.

ಈ ಬಗ್ಗೆ ಪೋಸ್ಟ್ ಮಾಡಿರುವ ನಟ ಬುಲೆಟ್ ಪ್ರಕಾಶ್ ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು. ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತಾಡೋಕ್ಕೆ ಯಾವುದೇ ನೈತಿಕತೆ ಇಲ್ಲ… ನಾಳೆ ವೀಡಿಯೋ ಮೂಲಕ ಉತ್ತರ ಕೊಡುತ್ತೀನಿ… ಎಂದು ಹೇಳಿದ್ದಾರೆ.

ಜನರಿಗೆ ಈ ರೀತಿಯ ತಪ್ಪು ಸಂದೇಶಗಳನ್ನು ರವಾನಿಸುವುದು ಸರಿಯಲ್ಲ. ಒಬ್ಬ ವಿಶ್ವನಾಯಕರ ವಿರುದ್ಧ ಮಾತಾಡೋದು ಸರಿಯಲ್ಲ. ಇಡೀ ಜಗತ್ತು ಅವರನ್ನು ಗೌರವದಿಂದ ಕಾಣುತ್ತದೆ. ಸೆಲ್ಯೂಟ್ ಹೊಡೆಯುತ್ತದೆ. ನಮ್ಮ ಭಾರತ ದೇಶ ಎಲ್ಲೋ ಇತ್ತು. ಆದ್ರೆ ಇಂದು ಈ ದೇಶವನ್ನು ಪ್ರಪಂಚದಾದ್ಯಂತ `ಹಿಂದೂಸ್ತಾನ’ ಎಂದು ಹೇಳುವ ಮಟ್ಟಿಗೆ ಇಂದು ಭಾರತವನ್ನು ಅವರು ಬೆಳೆಸಿದ್ದಾರೆ ಅಂದರು.

ಇಂತಹ ಒಬ್ಬ ವಿಶ್ವನಾಯಕನ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆ, ಅರ್ಹತೆ ಹಾಗೂ ಜವಾಬ್ದಾರಿಯನ್ನು ಬಿಟ್ಟು ಹೊರಬಂದಿದ್ದೀರಿ. ಇದು ನಿಮಗೆ ಶೋಭೆ ತರುವಂತದ್ದಲ್ಲ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

2 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

2 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

2 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

2 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

2 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

2 days ago