ಹೊಸದಿಲ್ಲಿ, : ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವ ‘ಚಾಂಪಿಯನ್ಸ್ ಆಫ್ ದ ಅರ್ಥ್’ ಪ್ರಶಸ್ತಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್ರಿಂದ ಸ್ವೀಕರಿಸಿದರು.
ಪರಿಸರ ಸಂರಕ್ಷಣೆ ಹಾಗೂ ಹವಾಮಾನ ಬದಲಾವಣೆಯನ್ನು ಕಡಿಮೆಗೊಳಿಸುವ ಪ್ರಯತ್ನಗಳಲ್ಲಿ ಆದರ್ಶಪ್ರಾಯ ನಾಯಕತ್ವವನ್ನು ತೋರಿದ ಪ್ರಧಾನಮಂತ್ರಿ ಮೋದಿ ಅವರನ್ನು ಕಾರ್ಯನೀತಿ ನಾಯಕತ್ವ ವಿಭಾಗದಡಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ,”ಇದು ಭಾರತೀಯರಿಗೆ ಸಂದ ಗೌರವ. ಪರಿಸರ ಸಂರಕ್ಷಣೆಯಲ್ಲಿ ಭಾರತೀಯರು ಬದ್ಧರಾಗಿದ್ದಾರೆ” ಎಂದರು.
”ಹವಾಮಾನ ಕ್ರಿಯೆಯಲ್ಲಿ ವಿಶ್ವಕ್ಕೆ ದಿಟ್ಟ ನಾಯಕತ್ವದ ಅಗತ್ಯವಿದೆ. ಇದಕ್ಕೆ ಒಂದು ನಿದರ್ಶನವಾಗಿರುವ ಭಾರತಕ್ಕೆ ಕೃತಜ್ಞತೆ ಸಲ್ಲಿಸುವೆ. ಪ್ರಧಾನಮಂತ್ರಿ ನರೇಂದ್ರ ಮೋದಿಗೆ ‘ಚಾಂಪಿಯನ್ಸ್ ಆಫ್ ದ ಅರ್ಥ್’ ಪ್ರಶಸ್ತಿ ನೀಡಿದ್ದಕ್ಕೆ ಸಂತೋಷವಾಗುತ್ತಿದೆ” ಎಂದು ಗುಟರ್ರೆಸ್ ಟ್ವೀಟ್ ಮಾಡಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…