ಮಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು ಬಾಧಿತ ಭಾರತದ ಪ್ರಥಮ ಪ್ರಕರಣ ಸಮೀಪದ ಕೇರಳದಲ್ಲಿ ಪತ್ತೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಮಂಗಳೂರು ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕೊರೊನಾ ಸೋಂಕು ಪತ್ತೆ, ಮುನ್ನೆಚ್ಚರಿಕೆ ಕ್ರಮ ಹಾಗೂ ಜಾಗೃತಿ ಕಾರ್ಯಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನವಮಂಗಳೂರು ಬಂದರು ಮಂಡಳಿ, ರೈಲ್ವೆ ಇಲಾಖೆ, ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳು, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗವಹಿಸಿದ್ದರು.
ಮಂಗಳೂರು ವಿಮಾನ ನಿಲ್ದಾಣದ ಆಯಕಟ್ಟಿನ ಭಾಗಗಳಲ್ಲಿರುವ ಎಲ್ಇಡಿ ಫಲಕಗಳಲ್ಲಿ ಕೊರೊನಾ ಸೋಂಕು ಮತ್ತು ಎಚ್ಚರಿಕೆ ಬಗ್ಗೆ ಮಾಹಿತಿ ಪ್ರದರ್ಶನ ಆರಂಭಿಸಲಾಗಿದೆ. ಮಂಗಳೂರಿನಿಂದ ಚೀನಾಕ್ಕೆ ನೇರ ವಿಮಾನ ಸೌಲಭ್ಯ ಇಲ್ಲ, ಹೀಗಾಗಿ ಇಲ್ಲಿ ಸ್ಕ್ರೀನಿಂಗ್ ನಡೆಯುತ್ತಿಲ್ಲ. ಕೇಂದ್ರ ಸರ್ಕಾರದಿಂದ ನಮಗೆ ಇನ್ನೂ ಯಾವುದೇ ಸೂಚನೆ ಬಂದಿಲ್ಲ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲನೆ ಮಾಡುತ್ತಿದ್ದೇವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.
ಭಯ ಬೇಡ, ಎಚ್ಚರವಿರಲಿ
– ಲಕ್ಷಣ: ತೀವ್ರ ಜ್ವರ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ.
– ಹರಡುವ ರೀತಿ: ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೇ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ, ಸೋಂಕಿತರನ್ನು ಮುಟ್ಟುವುದರಿಂದ ಹರಡಬಹುದು.
– ಸೋಂಕು ಪತ್ತೆ: ಮೂಗು, ಗಂಟಲಿನ ಸ್ರಾವದ ಲೇಪನ ಮತ್ತು ರಕ್ತದ ಮಾದರಿ ಪರೀಕ್ಷೆ.
– ಚಿಕಿತ್ಸೆ: ಲಕ್ಷಣ ಆಧಾರಿತ ಚಿಕಿತ್ಸೆ. ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ.
– ಮುಂಜಾಗರೂಕತಾ ಕ್ರಮ: ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವುದು, ಕೈಯನ್ನು ಆಗಾಗ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯ ಕ್ರಮ. ಅನಾರೋಗ್ಯದಿಂದಿರುವ ಅಥವಾ ಕೆಮ್ಮು ಮತ್ತು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದದಿರುವುದು. ಪ್ರಾಣಿಗಳ ನೇರ ಸಂಪರ್ಕ ಹಾಗೂ ಬೇಯಿಸದ ಅಥವಾ ಕಚ್ಚಾ ಮಾಂಸ ಸೇವನೆ ಮಾಡದಿರುವುದು.
– ಹೆಚ್ಚಿನ ಮಾಹಿತಿಗೆ: ದ.ಕ. ಜಿಲ್ಲಾ ಸರ್ವೇಕ್ಷಣಾ ಘಟಕ (0824- 2420466) ಸಂಪರ್ಕಿಸಿ.
ಉಡುಪಿಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಹೀಗಾಗಿ ಶುಕ್ರವಾರ ಕೆಎಂಸಿ ವೈದ್ಯರು ಹಾಗೂ ಜಿಲ್ಲಾಸ್ಪತ್ರೆ ವೈದ್ಯರೊಂದಿಗೆ ಸಮಾಲೋಚನೆ ಸಭೆ ನಡೆಸಲಾಗುವುದು. ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಔಷಧ ದಾಸ್ತಾನುಗಳ ಬಗ್ಗೆ ಚರ್ಚೆ ನಡೆಸಲಾಗುವುದು.
– ಡಾ.ಸುಧೀರ್ಚಂದ್ರ ಸೂಡ, ಡಿಎಚ್ಒ, ಉಡುಪಿಕೊರೊನಾ ಸೋಂಕು ಬಗ್ಗೆ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿ ಶುಕ್ರವಾರ ಜನರಿಗೆ ಮಾಹಿತಿ ಒದಗಿಸಲಿದ್ದಾರೆ.
– ಡಾ.ಆರ್.ಸೆಲ್ವಮಣಿ, ಸಿಇಒ, ದ.ಕ. ಜಿಲ್ಲಾ ಪಂಚಾಯಿತಿಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…