ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ಮತ ಯಾಚನೆಯ ಪ್ರಸ್ತಾಪವನ್ನು ಮಂಡಿಸಿದರು.ಧ್ವನಿಮತದ ಮೂಲಕ ಬಿಎಸ್ವೈ ಅವರು ವಿಶ್ವಾಸಮತವನ್ನು ಗೆದ್ದರು
ಸದನದಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದ್ದೇನೆ. ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದುಕೊಂಡಿದ್ದೇನೆ. ನಮ್ಮ ಸರ್ಕಾರಕ್ಕೆ ವಿರೋಧ ಪಕ್ಷಗಳ ಸಹ ಬೆಂಬಲ ನೀಡಬೇಕು ಎಂದು ಕೇಳಿಕೊಂಡರು. ನನ್ನನ್ನು ವಿರೋಧಿಸಿದರೂ ನಾನು ದ್ವೇಷ ಮಾಡುವುದಿಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯ ಮಾತನಾಡಿ, ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದನ್ನು ನಾನು ಸ್ವಾಗತ ಮಾಡುತ್ತೇನೆ. ದೀರ್ಘ ಕಾಲ ಚರ್ಚೆ ನಡೆದಿದೆ. ಹೀಗಾಗಿ ಜಾಸ್ತಿ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.
ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯಾಬಲ 224 ಆಗಿದ್ದು 17 ಮಂದಿಯನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. 105 ಶಾಸಕರ ಬೆಂಬಲ ಹೊಂದಿದ್ದರಿಂದ ಬಿಎಸ್ವೈ ಬಹುಮತ ಸಾಬೀತು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಬಹುಮತ ಸಾಬೀತು ಪಡಿಸಲು 105 ಶಾಸಕರ ಬೆಂಬಲ ಬೇಕಿತ್ತು. ಧ್ವನಿಮತದ ಮೂಲಕ ಯಡಿಯೂರಪ್ಪ ಸರ್ಕಾರ ಪಾಸ್ ಆಗಿದ್ದು ಮುಂದಿನ 6 ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…