Featured

ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಸಾಧಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ – Vishwanews24

ಪಣಜಿ: ಮನೋಹರ್ ಪರಿಕ್ಕರ್ ನಿಧನದ ನಂತರ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇಂದು ನಡೆದ ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತದಲ್ಲಿ ಸಿಎಂ ಪ್ರಮೋದ್ ಸಾವಂತ್ ಗೆಲುವು ಸಾಧಿಸಿದ್ದು, ಪ್ರಮೋದ್ ಸಾವಂತ್ ಸರ್ಕಾರಕ್ಕೆ 20 ಶಾಸಕರು ಬೆಂಬಲ ಘೋಷಣೆ ಮಾಡಿದ್ದಾರೆ. ಆ ಮೂಲಕ ಪ್ರಮೋದ್ ಸಾವಂತ್ ಸರ್ಕಾರ ಗೆಲುವು ಸಾಧಿಸಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ ನೇತೃತ್ವ ಮೈತ್ರಿಕೂಟಕ್ಕೆ ಒಟ್ಟು 20 ಶಾಸಕರು ಬೆಂಬಲ ನೀಡಿದ್ದು, ಬಿಜೆಪಿಯ 11, ಮಿತ್ರಪಕ್ಷಗಳಾದ ಜಿಎಫ್ ಪಿ, ಎಂಜಿಪಿ ತಲಾ ಮೂರು ಶಾಸಕರು ಮತ್ತು 3 ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.ಅಂತೆಯೇ ಓರ್ವ ಬಿಜೆಪಿ ಶಾಸಕ ಅನಾರೋಗ್ಯದಿಂದ ವಿಶ್ವಾಸಮತ ಯಾಚನೆಗೆ ಗೈರಾಗಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಇದೀಗ 36 ಮಂದಿ ಶಾಸಕರಿದ್ದು, ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ಇಬ್ಬರು ಕಾಂಗ್ರೆಸ್ ಶಾಸಕರಾದ ಸುಭಾಷ್ ಶಿರೋಡ್ಕರ್ ಹಾಗೂ ದಯಾನಂದ್ ಸೊಪ್ಚೆ ಅವರೂ ಕೂಡ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಗೋವಾ ವಿಧಾನಸಭೆ ಸದಸ್ಯ ಬಲ ಇದೀಗ 36ಕ್ಕೆ ಕುಸಿದಿದ್ದು, ಬಹುಮತ ಸಾಬೀತಿಗೆ 19 ಶಾಸಕರ ಬೆಂಬಲ ಬೇಕಿತ್ತು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಂಧಾನ ಪ್ರಕ್ರಿಯೆ ಮೂಲಕ ನೂತನ ನಾಯಕನ ಆಯ್ಕೆ ಸುಗಮವಾಗಿತ್ತು.ಮುಖ್ಯಮಂತ್ರಿ ಸಾವಂತ್ ಮಂಡಿಸಿದ ವಿಶ್ವಾಸಮತ ಯಾಚನೆ ನಿರ್ಣಯಕ್ಕೆ 5 ಮತಗಳ ಅಂತರದಿಂದ ಗೆಲುವು ದೊರೆತಿದೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

22 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

22 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

22 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

23 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago