ಪಣಜಿ: ಮನೋಹರ್ ಪರಿಕ್ಕರ್ ನಿಧನದ ನಂತರ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಇಂದು ನಡೆದ ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಗೋವಾ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತದಲ್ಲಿ ಸಿಎಂ ಪ್ರಮೋದ್ ಸಾವಂತ್ ಗೆಲುವು ಸಾಧಿಸಿದ್ದು, ಪ್ರಮೋದ್ ಸಾವಂತ್ ಸರ್ಕಾರಕ್ಕೆ 20 ಶಾಸಕರು ಬೆಂಬಲ ಘೋಷಣೆ ಮಾಡಿದ್ದಾರೆ. ಆ ಮೂಲಕ ಪ್ರಮೋದ್ ಸಾವಂತ್ ಸರ್ಕಾರ ಗೆಲುವು ಸಾಧಿಸಿದ್ದಾರೆ.
ಮೂಲಗಳ ಪ್ರಕಾರ ಬಿಜೆಪಿ ನೇತೃತ್ವ ಮೈತ್ರಿಕೂಟಕ್ಕೆ ಒಟ್ಟು 20 ಶಾಸಕರು ಬೆಂಬಲ ನೀಡಿದ್ದು, ಬಿಜೆಪಿಯ 11, ಮಿತ್ರಪಕ್ಷಗಳಾದ ಜಿಎಫ್ ಪಿ, ಎಂಜಿಪಿ ತಲಾ ಮೂರು ಶಾಸಕರು ಮತ್ತು 3 ಪಕ್ಷೇತರ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.ಅಂತೆಯೇ ಓರ್ವ ಬಿಜೆಪಿ ಶಾಸಕ ಅನಾರೋಗ್ಯದಿಂದ ವಿಶ್ವಾಸಮತ ಯಾಚನೆಗೆ ಗೈರಾಗಿದ್ದಾರೆ.
40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಇದೀಗ 36 ಮಂದಿ ಶಾಸಕರಿದ್ದು, ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ಇಬ್ಬರು ಕಾಂಗ್ರೆಸ್ ಶಾಸಕರಾದ ಸುಭಾಷ್ ಶಿರೋಡ್ಕರ್ ಹಾಗೂ ದಯಾನಂದ್ ಸೊಪ್ಚೆ ಅವರೂ ಕೂಡ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಗೋವಾ ವಿಧಾನಸಭೆ ಸದಸ್ಯ ಬಲ ಇದೀಗ 36ಕ್ಕೆ ಕುಸಿದಿದ್ದು, ಬಹುಮತ ಸಾಬೀತಿಗೆ 19 ಶಾಸಕರ ಬೆಂಬಲ ಬೇಕಿತ್ತು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಂಧಾನ ಪ್ರಕ್ರಿಯೆ ಮೂಲಕ ನೂತನ ನಾಯಕನ ಆಯ್ಕೆ ಸುಗಮವಾಗಿತ್ತು.ಮುಖ್ಯಮಂತ್ರಿ ಸಾವಂತ್ ಮಂಡಿಸಿದ ವಿಶ್ವಾಸಮತ ಯಾಚನೆ ನಿರ್ಣಯಕ್ಕೆ 5 ಮತಗಳ ಅಂತರದಿಂದ ಗೆಲುವು ದೊರೆತಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…