ನವದೆಹಲಿ: ವಿಶ್ವದ ಯಾವುದೇ ರಾಷ್ಟ್ರ ಭಯೋತ್ಪಾದನೆಯಿಂದ ಸುರಕ್ಷಿತವಾಗಿಲ್ಲ, ಇದರ ವಿರುದ್ಧ ಅಂತರಾಷ್ಟ್ರೀಯ ಕ್ರಮ ಅಗತ್ಯವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ಕೊರಿಯಾ ಭೇಟಿ ವೇಳೆ ಸಿಯೋಲ್ ಡಿಫೆನ್ಸ್ ಡೈಲಾಗ್ 2019ರಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್ ಅವರು, ಯುಎನ್ ಮತ್ತು ಇತರ ವೇದಿಕೆಗಳ ಮೂಲಕ ಭಾರತವು ಉಭಯಪಕ್ಷೀಯವಾಗಿ, ಪ್ರಾದೇಶಿಕವಾಗಿ ಮತ್ತು ಜಾಗತಿಕವಾಗಿ ಭಯೋತ್ಪಾದನೆ ನಿಗ್ರಹದ ಸಹಕಾರವನ್ನು ಸಕ್ರಿಯವಾಗಿ ಅನುಸರಿಸುತ್ತಿದೆ. ಭಯೋತ್ಪಾದನೆ ವಿರುದ್ಧ ಸಾಮೂಹಿಕವಾಗಿ ಅಂತರಾಷ್ಟ್ರೀಯವಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಇಡೀ ವಿಶ್ವ ಎದುರಿಸುತ್ತಿರುವ ಹಲವಾರು ಭದ್ರತಾ ಸವಾಲುಗಳಲ್ಲಿ ಭಯೋತ್ಪಾದನೆ ಅತ್ಯಂತ ಆತಂಕಕಾರಿಯಾಗಿದೆ. ವಿಶ್ವ ರಾಜಕಾರಣಕ್ಕೆ ಇದು ಮಾರಕವಾಗಿದ್ದು, ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಅದಕ್ಕೆ ಹಣಕಾಸು ಒದಗಿಸುವವವರ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಭಯೋತ್ಪಾದನೆ ಅಂತರಾಷ್ಟ್ರೀಯ ಶಾಂತಿ ಹಾಗೂ ಸುರಕ್ಷತೆಗೆ ಜಾಗತಿಕ ಮತ್ತು ಪ್ರಾದೇಶಿಕ ಸವಾಲುಗಳನ್ನು ಉಲ್ಬಣಗೊಳಿಸಿದೆ. ಹೊಸ ಮತ್ತು ಉದಯೋನ್ಮುಖ ತಂತ್ರಜ್ಞನಗಳು ಪ್ರಾದೇಶಿಕ ಮತ್ತು ಜಾಗತಿಕ ಭದ್ರತಾ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…