ಬುಡಾಪೆಸ್ಟ್:-ಹಂಗೇರಿ ರಾಜಧಾನಿಯಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಹೆಮ್ಮೆಯ ಪುತ್ರ ಭಜರಂಗ್ ಪೂನಿಯಾ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಬುಡಾಪೆಸ್ಟ್ನಲ್ಲಿ ನಿನ್ನೆ ರಾತ್ರಿ ನಡೆದ ಪುರುಷರ 65 ಕೆಜಿ ವಿಭಾಗದಲ್ಲಿ ಭಜರಂಗ್ ಕ್ಯೂಬಾದ ಅಲೆಜಾಂಡ್ರೋ ಎನ್ರಿಕ್ ವಾಲ್ಟನ್ ಲೂಬಿಯರ್ ವಿರುದ್ಧ ಸೆಣಸಿ ವಿಜೇತರಾದರು.
ಭಜರಂಗ್ 2013 ವಿಶ್ವ ಕುಸ್ತಿ ಪಂದ್ಯದಲ್ಲಿ ಕಂಚಿನ ಪದಕ ಗೆದ್ದಿದ್ದರು, ಈಗ ಚಿನ್ನದ ಸಾಧನೆ ಮಾಡಿ ಕುಸ್ತಿ ವಿಬಾಗದಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ರಷ್ಯಾ ರಾಜಧಾನಿ ಮಾಸ್ಕೋದಲ್ಲಿ 2010ರಲ್ಲಿ ನಡೆದಿದ್ದ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನನ 66 ಕೆಜಿ ವಿಭಾಗದಲ್ಲಿ ಭಾರತದ ಸುಶೀಲ್ ಕುಮಾರ್ ಸ್ವರ್ಣ ಪದಕ ಗೆದ್ದಿದ್ದರು. ಈಗ ಭಜರಂಗ್ ಈ ಸಾಧನೆ ಮಾಡಿದ ದೇಶದ ಎರಡನೇ ಕುಸ್ತಿಪಟುವಾಗಿದ್ದಾರೆ. ಇತ್ತೀಚೆಗೆ ನಡೆದ ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಕ್ರೀಡಾಕೂಟಗಳಲ್ಲೂ ಇವರು ಚಿನ್ನದ ಪದಕಗಳನ್ನು ಜಯಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…