Featured

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದ ಪಿ.ವಿ.ಸಿಂಧು -Vishwanews24

ಬಾಸೆಲ್ : ಭಾರತದ ಶೇಟ್ಲರ್ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮುತ್ತಿಟ್ಟಿದ್ದಾರೆ. ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ.

38 ನಿಮಿಷಗಳ ಫೈನಲ್ ಹೋರಾಟದಲ್ಲಿ ಅವರದ್ದು ಅಧಿಕಾರಯುತ ಗೆಲುವು. ಹೈದರಾಬಾದಿನ ಸಿಂಧು 21–7, 21–7ರ ಎರಡು ನೇರ ಗೇಮ್‌ಗಳಲ್ಲಿ ಜಪಾನಿನ ನೊಜೊಮಿ ಒಕುಹರಾ ವಿರುದ್ಧ ಜಯಶಾಲಿಯಾದರು.

ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿದ್ದ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. ಇಂದು ನಡೆದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಜಪಾನ್ ನ ನೋಜೊಮಿ ಓಕುಹರಾ ಅವರನ್ನು 21-7, 21-7ರ ಅಂತರದಿಂದ ಮಣಿಸುವ ಮೂಲಕ ಇತಿಹಾಸ ಪುಟ ಸೇರಿದ್ದಾರೆ.

ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಇದು ಸಿಂಧು ಅವರ ಐದನೇ ಪದಕ. 2013, 2014ರಲ್ಲಿ ಸತತ ಎರಡು ಕಂಚು, 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಬೆಳ್ಳಿ ಪದಕ ಗೆದ್ದಿದ್ದರು. ಹೋದ ವರ್ಷ ಚೀನಾದ ನಾನ್ಜಿಂಗ್‌ನಲ್ಲಿ ನಡೆದಿದ್ದ  ಟೂರ್ನಿಯಲ್ಲಿ ಆಡಲು ಹೋಗುವ ಮುನ್ನ ಅವರು, ‘ಹೋದ ಸಲ ಬೆಳ್ಳಿ ಗೆದ್ದಿದ್ದೆ. ಈ ಸಲ ಆ ಪದಕದ ಬಣ್ಣ ಬದಲಿಸುತ್ತೇನೆ’ ಎಂದು ಚಿನ್ನ ಗೆಲ್ಲುವ ವಿಶ್ವಾಸವ್ಯಕ್ತಪಡಿಸಿದ್ದರು. ಆದರೆ ಹೋದ ಸಲವೂ ಅವರು ಬೆಳ್ಳಿ ಪದಕ ಗಳಿಸಿದ್ದರು.

ಈ ಬಾರಿ ಸತತ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸಿದ್ದ ಸಿಂಧು, ಚೊಚ್ಚಲ ಬಂಗಾರದ ಕನಸು ನನಸು ಮಾಡಿಕೊಂಡಿದ್ದಾರೆ.

ಭಾರತದ ದಂತಕತೆ ಪ್ರಕಾಶ್ ಪಡುಕೋಣೆ ಅವರು 1983ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎನಿಸಿದ್ದರು. ಸದ್ಯ 26 ವರ್ಷಗಳ ನಂತರ ಭಾರತಕ್ಕೆ ಒಲಿದ ಮೊದಲ ಪದಕ ಇದಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago