Featured

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದ ಪಿ.ವಿ.ಸಿಂಧು -Vishwanews24

ಬಾಸೆಲ್ : ಭಾರತದ ಶೇಟ್ಲರ್ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮುತ್ತಿಟ್ಟಿದ್ದಾರೆ. ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ.

38 ನಿಮಿಷಗಳ ಫೈನಲ್ ಹೋರಾಟದಲ್ಲಿ ಅವರದ್ದು ಅಧಿಕಾರಯುತ ಗೆಲುವು. ಹೈದರಾಬಾದಿನ ಸಿಂಧು 21–7, 21–7ರ ಎರಡು ನೇರ ಗೇಮ್‌ಗಳಲ್ಲಿ ಜಪಾನಿನ ನೊಜೊಮಿ ಒಕುಹರಾ ವಿರುದ್ಧ ಜಯಶಾಲಿಯಾದರು.

ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿದ್ದ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. ಇಂದು ನಡೆದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಜಪಾನ್ ನ ನೋಜೊಮಿ ಓಕುಹರಾ ಅವರನ್ನು 21-7, 21-7ರ ಅಂತರದಿಂದ ಮಣಿಸುವ ಮೂಲಕ ಇತಿಹಾಸ ಪುಟ ಸೇರಿದ್ದಾರೆ.

ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಇದು ಸಿಂಧು ಅವರ ಐದನೇ ಪದಕ. 2013, 2014ರಲ್ಲಿ ಸತತ ಎರಡು ಕಂಚು, 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಬೆಳ್ಳಿ ಪದಕ ಗೆದ್ದಿದ್ದರು. ಹೋದ ವರ್ಷ ಚೀನಾದ ನಾನ್ಜಿಂಗ್‌ನಲ್ಲಿ ನಡೆದಿದ್ದ  ಟೂರ್ನಿಯಲ್ಲಿ ಆಡಲು ಹೋಗುವ ಮುನ್ನ ಅವರು, ‘ಹೋದ ಸಲ ಬೆಳ್ಳಿ ಗೆದ್ದಿದ್ದೆ. ಈ ಸಲ ಆ ಪದಕದ ಬಣ್ಣ ಬದಲಿಸುತ್ತೇನೆ’ ಎಂದು ಚಿನ್ನ ಗೆಲ್ಲುವ ವಿಶ್ವಾಸವ್ಯಕ್ತಪಡಿಸಿದ್ದರು. ಆದರೆ ಹೋದ ಸಲವೂ ಅವರು ಬೆಳ್ಳಿ ಪದಕ ಗಳಿಸಿದ್ದರು.

ಈ ಬಾರಿ ಸತತ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸಿದ್ದ ಸಿಂಧು, ಚೊಚ್ಚಲ ಬಂಗಾರದ ಕನಸು ನನಸು ಮಾಡಿಕೊಂಡಿದ್ದಾರೆ.

ಭಾರತದ ದಂತಕತೆ ಪ್ರಕಾಶ್ ಪಡುಕೋಣೆ ಅವರು 1983ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎನಿಸಿದ್ದರು. ಸದ್ಯ 26 ವರ್ಷಗಳ ನಂತರ ಭಾರತಕ್ಕೆ ಒಲಿದ ಮೊದಲ ಪದಕ ಇದಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago