Featured

ವಿಷ್ಣುವರ್ಧನ್ ಸ್ಮಾರಕ ಎಲ್ಲಿ ಮಾಡಲು ಹೋದರೂ ವಿವಾದ ಆಗ್ತಿದೆ ; ನಾವೆಲ್ಲರೂ ಅಸಹಾಯಕರು: ಜಯಮಾಲಾ

ಉಡುಪಿ : ವಿಷ್ಣುವರ್ಧನ್ ಸ್ಮಾರಕದ ವಿಚಾರದಲ್ಲಿ ಮುಖ್ಯಮಂತ್ರಿ ಸೇರಿದಂತೆ ನಮಗೆಲ್ಲರಿಗೂ ಅಸಹಾಯಕತೆ ಇದೆ. ವಿಷ್ಣುವರ್ಧನ್ ಸ್ಮಾರಕ ಮಾಡಲು ಎಲ್ಲಿ ಹೋದರೂ ವಿವಾದ ಆಗ್ತಾ ಇದೆ. ಯಾಕೆ ಅಂತ ಗೊತ್ತಾಗ್ತಿಲ್ಲ ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಉಡುಪಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಂದ್ರೆ ವಿಷ್ಣುವರ್ಧನ್ ಗೆ ಪ್ರಾಣ. ವಿಷ್ಣುವರ್ಧನ್ ಸ್ಮಾರಕ ವಿಳಂಬವಾಗುತ್ತಿರುವ ಬಗ್ಗೆ ಭಾರತಿ ಅವರ ಬೇಸರ ಸಹಜ. ವಿಷ್ಣುವರ್ಧನ್ ನಮ್ಮನ್ನಗಲಿ ಒಂಭತ್ತು ವರ್ಷ ಆಗಿದೆ. ಭಾರತಿ ಅವರ ಕುಟುಂಬ ಕ್ಕೆ ನಾನು ಬೆಲೆ ಕೊಡ್ತೇನೆ.

ವಿಷ್ಣು ಆಸೆ ಏನು ಅನ್ನೋದು ಅವರ ಕುಟುಂಬಕ್ಕೆ ನಮಗಿಂತ ಚೆನ್ನಾಗಿ ತಿಳಿದಿರುತ್ತೆ. ಹೀಗಾಗಿ ಮೈಸೂರಲ್ಲಿ ಸ್ಮಾರಕ ಆಗಲಿ ಅಂತ ಭಾರತಿ ಕೇಳುತ್ತಿದ್ದಾರೆ. ಸ್ಮಾರಕ ನಿರ್ಮಾಣ ವಿಚಾರದಲ್ಲಿ ಭಾರತಿ ಅವರ ಬೇಸರ ಸಹಜ. ಹೀಗಾಗಿ ಕುಟುಂಬದ ಮಾತಿಗೆ ಬೆಲೆ ಕೊಡಬೇಕಾಗುತ್ತದೆ ಎಂದರು.

ಸಿಎಂ ಕುಮಾರಸ್ವಾಮಿ ಯವರು ಕೂಡಾ ಸಿನೆಮಾ ರಂಗದವರೇ ಹಾಗಾಗಿ ಭಾರತಿ ಹಾಗೂ ಮುಖ್ಯಮಂತ್ರಿಗಳ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಬರಲ್ಲ. ಭೂಮಿಗೆ ಸಂಬಂದಪಟ್ಟು ಸಣ್ಣ ತಕರಾರು ಇದೆ ಅನಿಸುತ್ತೆ. ವಿಷ್ಣು ಸಮಾಧಿ ವಿಚಾರದಲ್ಲಿ ನಮಗೆಲ್ಲರಿಗೂ ಅಸಹಾಯಕತೆ ಇದೆ. ನಾವೆಲ್ಲರೂ ಭಾರತಿ ಅವರ ಪರ ನಿಲ್ತೀವಿ ಎಂದು ಹೇಳಿದರು.

ಅಂಬರೀಷ್ ಸ್ಮಾರಕ ಖಚಿತ: ಅಂಬರೀಷ್ ಒಬ್ಬ ಮಹಾನ್ ನಾಯಕ. ನಿಜವಾದ ನಾಯಕ, ಜನರ ಹೃದಯದಲ್ಲಿ ವಾಸ ಮಾಡಿದ ನಟ. ಅಂಬರೀಷ್ ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ. ಸ್ಮಾರಕ ಕಂಠೀರವದಲ್ಲಿಯೇ ಆಗುತ್ತದೆ ಎಂದು ತಿಳಿಸಿದರು..

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago