Featured

ವಿಷ್ಣುವರ್ಧನ್ ಸ್ಮಾರಕ ಎಲ್ಲಿ ಮಾಡಲು ಹೋದರೂ ವಿವಾದ ಆಗ್ತಿದೆ ; ನಾವೆಲ್ಲರೂ ಅಸಹಾಯಕರು: ಜಯಮಾಲಾ

ಉಡುಪಿ : ವಿಷ್ಣುವರ್ಧನ್ ಸ್ಮಾರಕದ ವಿಚಾರದಲ್ಲಿ ಮುಖ್ಯಮಂತ್ರಿ ಸೇರಿದಂತೆ ನಮಗೆಲ್ಲರಿಗೂ ಅಸಹಾಯಕತೆ ಇದೆ. ವಿಷ್ಣುವರ್ಧನ್ ಸ್ಮಾರಕ ಮಾಡಲು ಎಲ್ಲಿ ಹೋದರೂ ವಿವಾದ ಆಗ್ತಾ ಇದೆ. ಯಾಕೆ ಅಂತ ಗೊತ್ತಾಗ್ತಿಲ್ಲ ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಉಡುಪಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಂದ್ರೆ ವಿಷ್ಣುವರ್ಧನ್ ಗೆ ಪ್ರಾಣ. ವಿಷ್ಣುವರ್ಧನ್ ಸ್ಮಾರಕ ವಿಳಂಬವಾಗುತ್ತಿರುವ ಬಗ್ಗೆ ಭಾರತಿ ಅವರ ಬೇಸರ ಸಹಜ. ವಿಷ್ಣುವರ್ಧನ್ ನಮ್ಮನ್ನಗಲಿ ಒಂಭತ್ತು ವರ್ಷ ಆಗಿದೆ. ಭಾರತಿ ಅವರ ಕುಟುಂಬ ಕ್ಕೆ ನಾನು ಬೆಲೆ ಕೊಡ್ತೇನೆ.

ವಿಷ್ಣು ಆಸೆ ಏನು ಅನ್ನೋದು ಅವರ ಕುಟುಂಬಕ್ಕೆ ನಮಗಿಂತ ಚೆನ್ನಾಗಿ ತಿಳಿದಿರುತ್ತೆ. ಹೀಗಾಗಿ ಮೈಸೂರಲ್ಲಿ ಸ್ಮಾರಕ ಆಗಲಿ ಅಂತ ಭಾರತಿ ಕೇಳುತ್ತಿದ್ದಾರೆ. ಸ್ಮಾರಕ ನಿರ್ಮಾಣ ವಿಚಾರದಲ್ಲಿ ಭಾರತಿ ಅವರ ಬೇಸರ ಸಹಜ. ಹೀಗಾಗಿ ಕುಟುಂಬದ ಮಾತಿಗೆ ಬೆಲೆ ಕೊಡಬೇಕಾಗುತ್ತದೆ ಎಂದರು.

ಸಿಎಂ ಕುಮಾರಸ್ವಾಮಿ ಯವರು ಕೂಡಾ ಸಿನೆಮಾ ರಂಗದವರೇ ಹಾಗಾಗಿ ಭಾರತಿ ಹಾಗೂ ಮುಖ್ಯಮಂತ್ರಿಗಳ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಬರಲ್ಲ. ಭೂಮಿಗೆ ಸಂಬಂದಪಟ್ಟು ಸಣ್ಣ ತಕರಾರು ಇದೆ ಅನಿಸುತ್ತೆ. ವಿಷ್ಣು ಸಮಾಧಿ ವಿಚಾರದಲ್ಲಿ ನಮಗೆಲ್ಲರಿಗೂ ಅಸಹಾಯಕತೆ ಇದೆ. ನಾವೆಲ್ಲರೂ ಭಾರತಿ ಅವರ ಪರ ನಿಲ್ತೀವಿ ಎಂದು ಹೇಳಿದರು.

ಅಂಬರೀಷ್ ಸ್ಮಾರಕ ಖಚಿತ: ಅಂಬರೀಷ್ ಒಬ್ಬ ಮಹಾನ್ ನಾಯಕ. ನಿಜವಾದ ನಾಯಕ, ಜನರ ಹೃದಯದಲ್ಲಿ ವಾಸ ಮಾಡಿದ ನಟ. ಅಂಬರೀಷ್ ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ. ಸ್ಮಾರಕ ಕಂಠೀರವದಲ್ಲಿಯೇ ಆಗುತ್ತದೆ ಎಂದು ತಿಳಿಸಿದರು..

Vishwa News 24

Recent Posts

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 minutes ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

19 minutes ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

26 minutes ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

34 minutes ago

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

3 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

4 hours ago