Featured

ವಿಷ್ಣುವರ್ಧನ್ ಸ್ಮಾರಕ ಎಲ್ಲಿ ಮಾಡಲು ಹೋದರೂ ವಿವಾದ ಆಗ್ತಿದೆ ; ನಾವೆಲ್ಲರೂ ಅಸಹಾಯಕರು: ಜಯಮಾಲಾ

ಉಡುಪಿ : ವಿಷ್ಣುವರ್ಧನ್ ಸ್ಮಾರಕದ ವಿಚಾರದಲ್ಲಿ ಮುಖ್ಯಮಂತ್ರಿ ಸೇರಿದಂತೆ ನಮಗೆಲ್ಲರಿಗೂ ಅಸಹಾಯಕತೆ ಇದೆ. ವಿಷ್ಣುವರ್ಧನ್ ಸ್ಮಾರಕ ಮಾಡಲು ಎಲ್ಲಿ ಹೋದರೂ ವಿವಾದ ಆಗ್ತಾ ಇದೆ. ಯಾಕೆ ಅಂತ ಗೊತ್ತಾಗ್ತಿಲ್ಲ ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಉಡುಪಿಯಲ್ಲಿ  ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಂದ್ರೆ ವಿಷ್ಣುವರ್ಧನ್ ಗೆ ಪ್ರಾಣ. ವಿಷ್ಣುವರ್ಧನ್ ಸ್ಮಾರಕ ವಿಳಂಬವಾಗುತ್ತಿರುವ ಬಗ್ಗೆ ಭಾರತಿ ಅವರ ಬೇಸರ ಸಹಜ. ವಿಷ್ಣುವರ್ಧನ್ ನಮ್ಮನ್ನಗಲಿ ಒಂಭತ್ತು ವರ್ಷ ಆಗಿದೆ. ಭಾರತಿ ಅವರ ಕುಟುಂಬ ಕ್ಕೆ ನಾನು ಬೆಲೆ ಕೊಡ್ತೇನೆ.

ವಿಷ್ಣು ಆಸೆ ಏನು ಅನ್ನೋದು ಅವರ ಕುಟುಂಬಕ್ಕೆ ನಮಗಿಂತ ಚೆನ್ನಾಗಿ ತಿಳಿದಿರುತ್ತೆ. ಹೀಗಾಗಿ ಮೈಸೂರಲ್ಲಿ ಸ್ಮಾರಕ ಆಗಲಿ ಅಂತ ಭಾರತಿ ಕೇಳುತ್ತಿದ್ದಾರೆ. ಸ್ಮಾರಕ ನಿರ್ಮಾಣ ವಿಚಾರದಲ್ಲಿ ಭಾರತಿ ಅವರ ಬೇಸರ ಸಹಜ. ಹೀಗಾಗಿ ಕುಟುಂಬದ ಮಾತಿಗೆ ಬೆಲೆ ಕೊಡಬೇಕಾಗುತ್ತದೆ ಎಂದರು.

ಸಿಎಂ ಕುಮಾರಸ್ವಾಮಿ ಯವರು ಕೂಡಾ ಸಿನೆಮಾ ರಂಗದವರೇ ಹಾಗಾಗಿ ಭಾರತಿ ಹಾಗೂ ಮುಖ್ಯಮಂತ್ರಿಗಳ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಬರಲ್ಲ. ಭೂಮಿಗೆ ಸಂಬಂದಪಟ್ಟು ಸಣ್ಣ ತಕರಾರು ಇದೆ ಅನಿಸುತ್ತೆ. ವಿಷ್ಣು ಸಮಾಧಿ ವಿಚಾರದಲ್ಲಿ ನಮಗೆಲ್ಲರಿಗೂ ಅಸಹಾಯಕತೆ ಇದೆ. ನಾವೆಲ್ಲರೂ ಭಾರತಿ ಅವರ ಪರ ನಿಲ್ತೀವಿ ಎಂದು ಹೇಳಿದರು.

ಅಂಬರೀಷ್ ಸ್ಮಾರಕ ಖಚಿತ: ಅಂಬರೀಷ್ ಒಬ್ಬ ಮಹಾನ್ ನಾಯಕ. ನಿಜವಾದ ನಾಯಕ, ಜನರ ಹೃದಯದಲ್ಲಿ ವಾಸ ಮಾಡಿದ ನಟ. ಅಂಬರೀಷ್ ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ. ಸ್ಮಾರಕ ಕಂಠೀರವದಲ್ಲಿಯೇ ಆಗುತ್ತದೆ ಎಂದು ತಿಳಿಸಿದರು..

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago