ನಟ ಅನಿರುದ್ಧ ಹೊಸ ಧಾರಾವಾಹಿಯನ್ನು ಘೋಷಿಸುತ್ತಿದ್ದಂತೆಯೇ ವಿರೋಧ ವ್ಯಕ್ತವಾಗಿದೆ. ಎಸ್.ನಾರಾಯಣ್ ನಿರ್ದೇಶನದ ಸೂರ್ಯವಂಶ ಧಾರಾವಾಹಿಯಲ್ಲಿ ಅನಿರುದ್ಧ ನಾಯಕನಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯನ್ನು ತಡೆಯಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದಾರೆ. ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧ ಹೇರಿದ್ದರಿಂದ ಅವರಿಗಾಗಿ ಸೀರಿಯಲ್ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಎಸ್.ನಾರಾಯಣ್, ‘ ಅನಿರುದ್ದ ಅವರ ಬಗ್ಗೆ ಬಹಳಷ್ಟು ಆರೋಪಗಳನ್ನ ಮಾಡಿದ್ದಾರೆ.ಆ ಆರೋಪಗಳು ಸುಳ್ಳಾಗಲಿ ಅಂತ ನಾನು ಆಶಿಸುತ್ತೇನೆ. ಅನಿರುದ್ದ ಅವರು ವಿಷ್ಣುವರ್ಧನ್ ಅಳಿಯ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲ್ಲ ಅನ್ನುವುದು ನನ್ನ ನಂಬಿಕೆ. ಮಾತು ಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಇದೆ. ಕಿರುತರೆಯ ನಿರ್ಮಾಪಕರು ನನ್ನ ಬಳಿ ಮಾತನಾಡಿ ಅವರು ಎದುರಿಸಿದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಂದು ಸಂಜೆ ಸಭೆಯಲ್ಲಿ ಆ ಕುರಿತು ಮಾತನಾಡುತ್ತೇನೆ’ ಎಂದಿದ್ದಾರೆ.
ಕನ್ನಡ ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ ಅವರಿಗೆ ಎರಡು ವರ್ಷಗಳ ಕಾಲ ನಿಷೇಧ ಹೇರುವ ಕುರಿತು ತೀರ್ಮಾನ ತಗೆದುಕೊಂಡಿತ್ತು. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಕಿರಿಕ್ ಮಾಡಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷಗಳ ಕಾಲ ಅನಿರುದ್ಧ ಅವರಿಗೆ ಯಾರೂ ಕೆಲಸ ಕೊಡಬಾರದು ಎಂದು ಹೇಳಲಾಗಿತ್ತು. ಆದರೆ, ಘಟನೆ ನಡೆದ ಕೆಲವೇ ತಿಂಗಳಲ್ಲೇ ಅನಿರುದ್ಧ ಮತ್ತೊಂದು ಧಾರಾವಾಹಿಗೆ ಹೀರೋ ಆಗಿ ಆಯ್ಕೆಯಾಗಿದ್ದಾರೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…