ಬೆಂಗಳೂರು : ಕನ್ನಡ ಚಿತ್ರರಂಗದ ದಿಗ್ಗಜ ನಟ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಾಹಸಸಿಂಹ ವಿಷ್ಣುವರ್ಧನ್ ಅವರು ಡಿಸೆಂಬರ್ 30, 2009ರಂದು ವಿಧಿವಶರಾದರು. ಮುಂದಿನ ತಿಂಗಳ 30 ರಂದು 9ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ಕನಸಾಗೇ ಉಳಿದಿರುವ ವಿಷ್ಣು ಸ್ಮಾರಕದ ಕುರಿತು ಅಭಿಮಾನಿಗಳು ಧ್ವನಿಯೆತ್ತಿದ್ದಾರೆ. ರಾಜ್ಕುಮಾರ್ ಸ್ಮಾರಕ ಪಕ್ಕದಲ್ಲೇ ಅಂಬರೀಷ್ ಸ್ಮಾರಕ ನಿರ್ಮಾಣವಾಗಲಿದ್ದು, ವಿವಾದ ಬಗೆಹರಿಸಿ ವಿಷ್ಣು ಸ್ಮಾರಕವನ್ನು ನಿರ್ಮಿಸಿ ಎಂಬುದು ಅಭಿಮಾನಿಗಳ ಆಶಯವಾಗಿದೆ..
ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕೂಡಲೇ ಆಸಕ್ತಿ ವಹಿಸಬೇಕು. ಜಾಗದ ಸಮಸ್ಯೆಯಿದ್ದರೆ ಅವರ ಕುಟುಂಬವನ್ನು ಕೇಳಿ ಸ್ಮಾರಕವನ್ನು ನಿರ್ಮಿಸಿ, ವಿಷ್ಣು ಅವರ ಆತ್ಮಕ್ಕೆ ಶಾಂತಿಯನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…