Featured

ವಿಷ ಪ್ರಸಾದ ಪ್ರಕರಣ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಸರೆಯಾಗಲು ಮುಂದಾದ ಮೂಡಬಿದ್ರೆಯ ಆಳ್ವಾಸ್ ಸಂಸ್ಥೆ

ಮಂಗಳೂರು: ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ಪ್ರಕರಣದ ದುರಂತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮೂರು ಮಕ್ಕಳಿಗೆ ಆಳ್ವಾಸ್ ಸಂಸ್ಥೆ ಆಸರೆಯಾಗಲು ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂವರು ಮಕ್ಕಳನ್ನು ದತ್ತು ಪಡೆಯಲು ನಿರ್ಧಾರ ಮಾಡಿದ್ದು, ಮೂವರು ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸಲು ಆಳ್ವಾಸ್ ಸಂಸ್ಥೆ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲದೇ ಉಚಿತ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿದೆ.

ದಂಪತಿಯ ಹಿರಿಯ ಮಗಳು ರಾಣಿಬಾಯಿ ಅವರ ಬಿಎಸ್‌ಸಿ , ಎರಡನೇ ಮಗಳು ಪ್ರಿಯಾಬಾಯಿ ಅವರ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಹಾಗೂ ಮಗ ರಾಜೇಶ್ ನಾಯ್ಕ್‌ನ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಮುಂದುವರಿಸುವುದಾದರೆ ಅವರಿಗೆ ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆಯಲು ಉಚಿತ ವ್ಯವಸ್ಥೆ ಕಲ್ಪಿಸಲಾಗುವುದು. ಹಾಸ್ಟೆಲ್‌ನಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಅವರಿಗೆ ಸಂಪೂರ್ಣವಾಗಿ ಉಚಿತವಾಗಿ ಕೊಡುತ್ತೇವೆ. ಅವರ ವ್ಯಾಸಂಗದ ಬಳಿಕ ಅವರಿಗೆ ಉದ್ಯೋಗ ಕಲ್ಪಿಸುವ ಜವಾಬ್ದಾರಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿಭಾಯಿಸುತ್ತದೆ ಎಂದು ಡಾ.ಎಂ ಮೋಹನ ಆಳ್ವ ಮಾಧ್ಯಮದವರಿಗೆ ತಿಳಿಸಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

2 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

2 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

2 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

2 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

3 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

3 hours ago