Featured

ವಿಷ ಪ್ರಸಾದ ಪ್ರಕರಣ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಸರೆಯಾಗಲು ಮುಂದಾದ ಮೂಡಬಿದ್ರೆಯ ಆಳ್ವಾಸ್ ಸಂಸ್ಥೆ

ಮಂಗಳೂರು: ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ಪ್ರಕರಣದ ದುರಂತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮೂರು ಮಕ್ಕಳಿಗೆ ಆಳ್ವಾಸ್ ಸಂಸ್ಥೆ ಆಸರೆಯಾಗಲು ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂವರು ಮಕ್ಕಳನ್ನು ದತ್ತು ಪಡೆಯಲು ನಿರ್ಧಾರ ಮಾಡಿದ್ದು, ಮೂವರು ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸಲು ಆಳ್ವಾಸ್ ಸಂಸ್ಥೆ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲದೇ ಉಚಿತ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿದೆ.

ದಂಪತಿಯ ಹಿರಿಯ ಮಗಳು ರಾಣಿಬಾಯಿ ಅವರ ಬಿಎಸ್‌ಸಿ , ಎರಡನೇ ಮಗಳು ಪ್ರಿಯಾಬಾಯಿ ಅವರ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಹಾಗೂ ಮಗ ರಾಜೇಶ್ ನಾಯ್ಕ್‌ನ ಪಿಯುಸಿ ವ್ಯಾಸಂಗವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಮುಂದುವರಿಸುವುದಾದರೆ ಅವರಿಗೆ ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆಯಲು ಉಚಿತ ವ್ಯವಸ್ಥೆ ಕಲ್ಪಿಸಲಾಗುವುದು. ಹಾಸ್ಟೆಲ್‌ನಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಅವರಿಗೆ ಸಂಪೂರ್ಣವಾಗಿ ಉಚಿತವಾಗಿ ಕೊಡುತ್ತೇವೆ. ಅವರ ವ್ಯಾಸಂಗದ ಬಳಿಕ ಅವರಿಗೆ ಉದ್ಯೋಗ ಕಲ್ಪಿಸುವ ಜವಾಬ್ದಾರಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿಭಾಯಿಸುತ್ತದೆ ಎಂದು ಡಾ.ಎಂ ಮೋಹನ ಆಳ್ವ ಮಾಧ್ಯಮದವರಿಗೆ ತಿಳಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

11 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

11 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

11 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

12 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

12 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

12 hours ago