ಕಾಸರಗೋಡು: ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27).
ಅಜಿತ್ ಪೈಂಟಿಂಗ್ ಕಾರ್ಮಿಕ ರಾಗಿದ್ದು , ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ನ ಖಾಸಗಿ ಶಾಲಾ ಶಿಕ್ಷಕಿ ಯಾಗಿದ್ದರು. ಸೋಮವಾರ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಇದ್ದ ಇಬ್ಬರನ್ನು ದೇರಳ ಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ರಾತ್ರಿ ಹಾಗೂ ಶ್ವೇತಾ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಸೋಮವಾರ ಅಜಿತ್ ಮೂರು ವರ್ಷದ ತನ್ನ ಮಗ ಸಹಿತ ಬಂದ್ಯೋಡಿ ನಲ್ಲಿರುವ ಸಹೋದರಿ ಮನೆಗೆ ಬಂದಿದ್ದು, ಬೇರೆ ಕಡೆಗೆ ತೆರಳಲಿದ್ದು, ಮಗನನ್ನು ನೋಡಿ ಕೊಳ್ಳುವಂತೆ ಹೇಳಿ ತೆರಳಿದ್ದರು ಎನ್ನಲಾಗಿದೆ. ಮಗನನ್ನು ಸಹೋದರಿ ಮನೆಯಲ್ಲಿ ಬಿಟ್ಟು ಮರಳಿದ ಅಜಿತ್ ಹಾಗೂ ಪತ್ನಿ ಶ್ವೇತಾ ವಿಷ ಸೇವಿಸಿದ್ದಾರೆ. ಬಿದ್ದಿದ್ದ ಇಬ್ಬರನ್ನು ಪರಿಸರವಾಸಿಗಳು ಗಮನಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರೂ ಮೃತ ಪಟ್ಟಿದ್ದಾರೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]