ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ – Vishwanews24

Featured, ದಕ್ಷಿಣ ಕನ್ನಡ

ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.

ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ತುಳುನಾಡಿನ ಕೋಣಗಳ ಓಟದ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ತಯಾರಾಗುತ್ತಿರುವ ವೀರ ಕಂಬಳ ಎಂಬ ಸಿನೆಮಾದ ಶೂಟಿಂಗ್ ಭರದಿಂದ ಸಾಗಿದೆ.

ಮಂಗಳೂರು: ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವಹಿಂದೂ ಪರಿಷತ್ – Vishwanews24

ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಬರೋಬ್ಬರಿ 7 ವರ್ಷಗಳ ಕಾಲ ಸಂಶೋಧನೆ ಮಾಡಿ ಕಥೆ ಬರೆಯಲಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ತುಳುವಿನಲ್ಲಿ ಈ ಚಿತ್ರಕ್ಕೆ ‘ಬಿರ್ದ್‌ದ ಕಂಬಳ’ ಎಂದು ಹೆಸರಿಡಲಾಗಿದೆ.

ಈವರೆಗೆ ಹಲವು ಚಲನಚಿತ್ರಗಳಲ್ಲಿ ಕಂಬಳವನ್ನು ಚಿತ್ರದ ಭಾಗವಾಗಿ ನೋಡಿದ್ದೇವೆ ಹೊರತು ಸಂಪೂರ್ಣ ಕಂಬಳದ ಬಗ್ಗೆ ಚಿತ್ರ ಬಂದಿಲ್ಲ. ವೀರ ಕಂಬಳ ಎಂಬ ಸಿನೆಮಾ ಕಂಬಳ ಎಂಬ ಜಾನಪದ ಕ್ರೀಡೆಯನ್ನು ಕೇಂದ್ರವಾಗಿ ಇಟ್ಟುಕೊಂಡು ಮೂಡಿಬಂದಿರುವ ಚಿತ್ರವಾಗಿದೆ. ಈ ಚಿತ್ರಕ್ಕೆ ಅರುಣ್ ರೈ ತೋಡಾರ್ ಎಂಬವರು ಬಂಡವಾಳ ಹೂಡಿದ್ದಾರೆ.

ಉಡುಪಿ : ಜ. 4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ – Vishwanews24

‘ವೀರ ಕಂಬಳ’ ಚಿತ್ರದ ಕೊನೆ ಹಂತದ ಚಿತ್ರೀಕರಣ ಸದ್ಯ ನಡೆಯುತ್ತಿದ್ದು, ಈ ಚಿತ್ರಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚುತ್ತಿರುವ ಫೋಟೋ ಸಖತ್ ವೈರಲ್ ಆಗಿದೆ. ತುಳುನಾಡಿನ ಪ್ರಸಿದ್ಧ ಕಲಾವಿದರು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ಇದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ.

Leave a Reply