Featured

ವೃದ್ದಾಪ್ಯ ವೇತನ 2000 ಹಾಗೂ ಅಂಗವಿಕಲರ ಮಾಸಾಶನ 2500ವರೆಗೆ ಏರಿಕೆ : ಕುಮಾರಸ್ವಾಮಿ -Vishwanews24

ರಾಯಚೂರು,: ವೃದ್ದಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಈ ಭರವಸೆ ನೀಡಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.

ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600ಮಾಸಾಶನವನ್ನು‌1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇನೆ ಎಂದರು.

ಕೃಷಿ ಅಭಿವೃದ್ಧಿಗೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕೃಷಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳುವುದಕ್ಕೆ ಮುಂದಾಗಬೇಕು ಎಂದ ಅವರು, ಎನ್ ಪಿಎಸ್ ನೌಕಕರ ನೋವು ನನಗೆ ಅರ್ಥವಾಗಿದ್ದು, ಎನ್ ಪಿಎಸ್ ರದ್ದು ಮಾಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ತಕ್ಷಣ ತಮ್ಮನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯ ಟೀಕೆ ಮಾಡುವ ಪ್ರತಿಪಕ್ಷಗಳಿಗೆ ತಮ್ಮ ಶೈಲಿಯಲ್ಲಿಯೇ ಚಾಟಿ ಬಿಸಿದ ಸಿಎಂ ಅವರು ರಾಯಚೂರು ಜಿಲ್ಲೆಯಲ್ಲಿ 272.22ಕೋಟಿ ರೂ. ರೈತರ ಸಾಲಮನ್ನಾಗೆ ಇದುವರೆಗೆ ರಾಯಚೂರು ಜಿಲ್ಲೆಗೆ ಸಂದಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ರೈತರ ಸಾಲಮನ್ನಾಗೆ ಹಾಗೂ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಾಗಿ ತಿಳಿಸಿದ ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲಮನ್ನಕ್ಕಾಗಿ ಒಂದು ವರ್ಷದಲ್ಲಿಯೇ 25ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago