ಮಂಗಳೂರು: ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ವಿಟ್ಲದ ಪರಿಯಾಲ್ತಡ್ಕ ಮನೇಲಾದ ಕ್ರೈಸ್ಟ್ ದಿ ಕಿಂಗ್ ಚರ್ಚ್ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಿಂದ ನೋವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಪಾದ್ರಿಯನ್ನು ಸಂಬಂಧಪಟ್ಟ ಚರ್ಚ್ ನ ಧಾರ್ಮಿಕ ಹುದ್ದೆಯಿಂದ ತಕ್ಷಣದಿಂದ ಅನ್ವಯವಾಗುವಂತೆ ತೆರವುಗೊಳಿಸುತ್ತಿರುವುದಾಗಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ(ಡಯಾಸಿಸ್ ಆಫ್ ಮಂಗಳೂರು)ದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಫಾ.ಜೆ.ಬಿ.ಸಲ್ದಾನ ಮತ್ತು ರೊನಾಲ್ಡ್ ಕ್ಯಾಸ್ತಲಿನೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ. ಈ ಪ್ರಕರಣ ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ್ದಾಗಿದೆ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತಿರುವ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಸರಕಾರಿ ಇಲಾಖೆಗಳು ಆರಂಭಿಸಿರುವ ತನಿಖೆಯ ಜತೆಗೆ ಪ್ರಕರಣದ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚಲು ಕ್ರೈಸ್ತ ಧರ್ಮಪ್ರಾಂತದ ಆಂತರಿಕ ಸಮಿತಿಯೂ ವಿಚಾರಣೆ ನಡೆಸಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪರಿಯಾಲ್ತಡ್ಕ ಮನೇಲಾದ ಕ್ರೈಸ್ಟ್ ದಿ ಕಿಂಗ್ ಚರ್ಚ್ ನ ಪಾದ್ರಿ ನೆಲ್ಸನ್ ಒಲಿವೆರಾ ಎಂಬವರು ಫೆ.29ರಂದು ಬೆಳಗ್ಗೆ ವೃದ್ಧ ದಂಪತಿಯೊಂದರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದರೆನ್ನಲಾದ ಸಿಸಿಟಿವಿ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಾದ್ರಿಯು ವೃದ್ಧರೊಬ್ಬರಿಗೆ ಹಲ್ಲೆ ನಡೆಸಿದ್ದಲ್ಲದೆ, ಕುತ್ತಿಗೆ ಪಟ್ಟಿ ಹಿಡಿದು ಎಳೆದೊಯ್ದು ತೀವ್ರ ಹಲ್ಲೆ ನಡೆಸಿರುವುದು, ಪತಿಯ ರಕ್ಷಣೆಗೆ ಮುಂದಾದ ವೃದ್ಧ ಮಹಿಳೆಗೂ ಪಾದ್ರಿ ಒದೆಯುವುದು ವೀಡಿಯೊದಲ್ಲಿ ಸೆರೆಯಾಗಿದೆ.
ಈ ವಿಚಾರವಾಗಿ ಸಂತ್ರಸ್ತ ದಂಪತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…