ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ – Vishwanews24
ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ ಸಂಭ್ರಮ
ವೇಣೂರು(ಬೆಳ್ತಂಗಡಿ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ನಿನ್ನೆಯೇ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇದು ಮಾರ್ಚ್ 1ರವರೆಗೆ ಮುಂದುವರಿಯಲಿದ್ದು ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.
ನಮ್ಮ ಕುಟುಂಬದ ಹೆಣನೂ ಬಿಜೆಪಿ ಕಡೆ ಹೋಗಲ್ಲ : ಪ್ರಿಯಾಂಕ್ ಖರ್ಗೆ – Vishwanews24
ರಾಜ್ಯದಲ್ಲಿರುವ ಪ್ರಮುಖ ನಾಲ್ಕು ಬಾಹುಬಲಿ ಮೂರ್ತಿಗಳ ಪೈಕಿ ಮೂರು ಮೂರ್ತಿಗಳು ದಕ ಜಿಲ್ಲೆಯಲ್ಲಿದ್ದರೆ, ಅತಿ ಎತ್ತರದ ಮೂರ್ತಿ ಶ್ರವಣಬೆಳಗೊಳದಲ್ಲಿದೆ. ಕಾರ್ಕಳದಲ್ಲಿ 42 ಅಡಿ, ವೇಣೂರಿನಲ್ಲಿ 35 ಅಡಿ ಹಾಗೂ ಧರ್ಮಸ್ಥಳದಲ್ಲಿ 39 ಅಡಿ ಎತ್ತರದ ಬಾಹುಬಲಿ ಮೂರ್ತಿಗಳಿವೆ. ವೇಣೂರಿನ ಅಜಿಲ ಮನೆತನದವರು ಸ್ಥಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾ ಮಸ್ತಕಾಭಿಷೇಕ. ಈ ಹಿಂದೆ 2000, 2012ರಲ್ಲಿ ಮಹಾ ಮಸ್ತಕಾಭಿಷೇಕ ನಡೆದಿತ್ತು.
