Featured

ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ – Vishwanews24

ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ ಸಂಭ್ರಮ

ವೇಣೂರು(ಬೆಳ್ತಂಗಡಿ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ನಿನ್ನೆಯೇ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇದು ಮಾರ್ಚ್ 1ರವರೆಗೆ ಮುಂದುವರಿಯಲಿದ್ದು ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.

ರಾಜ್ಯದಲ್ಲಿರುವ ಪ್ರಮುಖ ನಾಲ್ಕು ಬಾಹುಬಲಿ ಮೂರ್ತಿಗಳ ಪೈಕಿ ಮೂರು ಮೂರ್ತಿಗಳು ದಕ ಜಿಲ್ಲೆಯಲ್ಲಿದ್ದರೆ, ಅತಿ ಎತ್ತರದ ಮೂರ್ತಿ ಶ್ರವಣಬೆಳಗೊಳದಲ್ಲಿದೆ. ಕಾರ್ಕಳದಲ್ಲಿ 42 ಅಡಿ, ವೇಣೂರಿನಲ್ಲಿ 35 ಅಡಿ ಹಾಗೂ ಧರ್ಮಸ್ಥಳದಲ್ಲಿ 39 ಅಡಿ ಎತ್ತರದ ಬಾಹುಬಲಿ ಮೂರ್ತಿಗಳಿವೆ. ವೇಣೂರಿನ ಅಜಿಲ ಮನೆತನದವರು ಸ್ಥಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾ ಮಸ್ತಕಾಭಿಷೇಕ. ಈ ಹಿಂದೆ 2000, 2012ರಲ್ಲಿ ಮಹಾ ಮಸ್ತಕಾಭಿಷೇಕ ನಡೆದಿತ್ತು.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

45 minutes ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 hour ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 hour ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 hour ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago