ವೇಣೂರು(ಬೆಳ್ತಂಗಡಿ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ನಿನ್ನೆಯೇ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇದು ಮಾರ್ಚ್ 1ರವರೆಗೆ ಮುಂದುವರಿಯಲಿದ್ದು ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.
ರಾಜ್ಯದಲ್ಲಿರುವ ಪ್ರಮುಖ ನಾಲ್ಕು ಬಾಹುಬಲಿ ಮೂರ್ತಿಗಳ ಪೈಕಿ ಮೂರು ಮೂರ್ತಿಗಳು ದಕ ಜಿಲ್ಲೆಯಲ್ಲಿದ್ದರೆ, ಅತಿ ಎತ್ತರದ ಮೂರ್ತಿ ಶ್ರವಣಬೆಳಗೊಳದಲ್ಲಿದೆ. ಕಾರ್ಕಳದಲ್ಲಿ 42 ಅಡಿ, ವೇಣೂರಿನಲ್ಲಿ 35 ಅಡಿ ಹಾಗೂ ಧರ್ಮಸ್ಥಳದಲ್ಲಿ 39 ಅಡಿ ಎತ್ತರದ ಬಾಹುಬಲಿ ಮೂರ್ತಿಗಳಿವೆ. ವೇಣೂರಿನ ಅಜಿಲ ಮನೆತನದವರು ಸ್ಥಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾ ಮಸ್ತಕಾಭಿಷೇಕ. ಈ ಹಿಂದೆ 2000, 2012ರಲ್ಲಿ ಮಹಾ ಮಸ್ತಕಾಭಿಷೇಕ ನಡೆದಿತ್ತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…