Featured

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚನೆ – Vishwanews24

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚನೆ

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ ವಂಚನೆಗೊಳಗಾದವರು.

ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್‌ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಆರೋಪಿಗಳಿಬ್ಬರು ಜ. 18ರಂದು ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ರವರ ಮನೆಗೆ ಬಂದು ಅವರ ಪುತ್ರ ಸುರೇಶ್‌ ಪಾಯಸ್‌ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆರೋಪಿಗಳು ಬಳಿಕ ಸುರೇಶ್‌ ಪಾಯಸ್‌ಗೆ ಮೊಬೈಲ್‌ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್‌ ಬುಕ್‌ ಮಾಡಿದ ನಕಲಿಪ್ರತಿಯನ್ನು ವಾಟ್ಸ್‌ ಆ್ಯಪ್‌ನಲ್ಲಿ ಕಳುಹಿಸಿರುವ ಆರೋಪಿಗಳು ಮುಂಬಯಿಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ಸುರೇಶ್‌ ಪಾಯಸ್‌ ಮುಂಬಯಿಗೆ ತೆರಳಿದ್ದು, ಅಲ್ಲಿ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಮರಳದೇ ವಂಚಿಸಿದ್ದಾರೆ.

ಈ ಬಗ್ಗೆ ಕಳೆದ ಮಾರ್ಚ್‌ ತಿಂಗಳಲ್ಲಿ ಲಿಯೋ ಪಾಯಸ್‌ರವರ ಮೊಬೈಲ್‌ಗೆ ಮೆಸೇಜ್‌ ಮಾಡಿ ನಿಮ್ಮ ಪುತ್ರನ ಟಿಕೆಟ್‌ ಕ್ಯಾನ್ಸಲ್‌ ಆಗಿದ್ದು, ಹಣ ಮತ್ತು ಪಾಸ್‌ಪೋರ್ಟನ್ನು ಕೊರಿಯರ್‌ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್‌ಪೋರ್ಟ್‌ ಮಾತ್ರ ಕಳುಹಿಸಿ ವಂಚಿಸಿದ್ದರು.

ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

53 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

59 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago