ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್ ವಂಚನೆಗೊಳಗಾದವರು.
ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಆರೋಪಿಗಳಿಬ್ಬರು ಜ. 18ರಂದು ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್ರವರ ಮನೆಗೆ ಬಂದು ಅವರ ಪುತ್ರ ಸುರೇಶ್ ಪಾಯಸ್ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆರೋಪಿಗಳು ಬಳಿಕ ಸುರೇಶ್ ಪಾಯಸ್ಗೆ ಮೊಬೈಲ್ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ ನಕಲಿಪ್ರತಿಯನ್ನು ವಾಟ್ಸ್ ಆ್ಯಪ್ನಲ್ಲಿ ಕಳುಹಿಸಿರುವ ಆರೋಪಿಗಳು ಮುಂಬಯಿಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ಸುರೇಶ್ ಪಾಯಸ್ ಮುಂಬಯಿಗೆ ತೆರಳಿದ್ದು, ಅಲ್ಲಿ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಮರಳದೇ ವಂಚಿಸಿದ್ದಾರೆ.
ಈ ಬಗ್ಗೆ ಕಳೆದ ಮಾರ್ಚ್ ತಿಂಗಳಲ್ಲಿ ಲಿಯೋ ಪಾಯಸ್ರವರ ಮೊಬೈಲ್ಗೆ ಮೆಸೇಜ್ ಮಾಡಿ ನಿಮ್ಮ ಪುತ್ರನ ಟಿಕೆಟ್ ಕ್ಯಾನ್ಸಲ್ ಆಗಿದ್ದು, ಹಣ ಮತ್ತು ಪಾಸ್ಪೋರ್ಟನ್ನು ಕೊರಿಯರ್ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್ಪೋರ್ಟ್ ಮಾತ್ರ ಕಳುಹಿಸಿ ವಂಚಿಸಿದ್ದರು.
ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…