ಕೋಲ್ಕತ್ತಾ,: ಸಂಗೀತ ಕಾರ್ಯಕ್ರಮವೊಂದರಲ್ಲಿ ಹಾಡುತ್ತಿದ್ದಾಗಲೇ ಬಾಲಿವುಡ್ ನ ಖ್ಯಾತ ಸಂಗೀತಗಾರ ಕೆಕೆ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಕೆಕೆ ಎಂದೇ ಜನಜನಿತವಾಗಿರುವ ಕೃಷ್ಣಕುಮಾರ್ ಕುನ್ನತ್ ಅವರಿಗೆ 53 ವರ್ಷ ವಯಸ್ಸಾಗಿತ್ತು. ಕೋಲ್ಕತ್ತಾದ ನಜ್ರುಲ್ ಮಂಜ್ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಅವರು ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತತ್ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
1999ರಲ್ಲಿ ಕೆಕೆ ಮೊದಲ ಆಲ್ಬಂ ‘ಪಾಲ್’ ಮಾಡಿದ್ದರು. ಇದರಿಂದ ಅವರಿಗೆ ಹಲವು ಅವಕಾಶಗಳು ಒದಗಿ ಬಂದು, ಸ್ಟಾರ್ ಸಂಗೀತಗಾರನಾಗಿ ಪ್ರಸಿದ್ದಿ ಪಡೆದಿದ್ದರು. 2000ರಲ್ಲಿ ಹಿನ್ನೆಲೆ ಗಾಯನದಲ್ಲಿಅಧಿಕೃತವಾಗಿ ವೃತ್ತಿಜೀವನ ಆರಂಭಿಸಿದ್ದರು.
ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ ಮತ್ತು ಬೆಂಗಾಲಿ ಭಾಷೆಗಳಲ್ಲಿ ಹಾಡನ್ನು ಹಾಡುತ್ತಿದ್ದ ಅವರು ತಮ್ಮ ಅದ್ಭುತ ಕಂಠದಿಂದ ಮನೆಮಾತಾಗಿದ್ದರು. ಕನ್ನಡದಲ್ಲಿ ಸಂಚಾರಿ, ಲವ್, ಮನಸಾರೆ, ಪರಿಚಯ, ಮಳೆ ಬರಲಿ ಮಂಜು ಇರಲಿ, ಬಹುಪರಾಕ್, ಯೋಗಿ, ರೌಡಿ ಅಳಿಯ, ಮದನ, ಮುಂತಾದ ಚಿತ್ರಗಳಿಗೆ ಧ್ವನಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕೆಕೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…