ನವದೆಹಲಿ: ದೆಹಲಿ ಪೊಲೀಸರು ವೈದ್ಯರ ಮೇಲೆ ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ಡಿಸೆಂಬರ್ 29ರಂದು ಬೆಳಿಗ್ಗೆ 8 ರಿಂದ ದೇಶಾದ್ಯಂತ ಎಲ್ಲ ಆರೋಗ್ಯ ಸೇವೆಗಳಿಂದ ಸಂಪೂರ್ಣ ಹಿಂತೆಗೆದುಕೊಳ್ಳುವಂತೆ ಫೆಡರೇಷನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ ಕರೆ ನೀಡಿದೆ ಎಂದು ತಿಳಿದು ಬಂದಿದೆ.
ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯ ಸಮಯದಲ್ಲಿ ಮಹಿಳಾ ವೈದ್ಯರನ್ನು ಪುರುಷ ಪೊಲೀಸ್ ಸಿಬ್ಬಂದಿ ಕ್ರೂರವಾಗಿ ಥಳಿಸಿ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಎಫ್ಎಐಎಂಎ ತಿಳಿಸಿದೆ.
ಇನ್ನು ನೀಟ್-ಪಿಜಿ 2021 ಕೌನ್ಸೆಲಿಂಗ್ ವಿಳಂಬದ ಬಗ್ಗೆ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ನಿವಾಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಸ್ತೆಯಲ್ಲಿ ಪೊಲೀಸರು ಮತ್ತು ವೈದ್ಯರ ನಡುವೆ ಘರ್ಷಣೆ ನಡೆದಿದೆ. ಅನೇಕ ಜನರು ಬೀದಿ ಬದಿಯಲ್ಲಿ ಗಾಯಗೊಂಡಿದ್ದರು ಎಂದು ಹೇಳಿದೆ.
ಪೊಲೀಸರ ಈ ದೌರ್ಜನ್ಯವನ್ನು ಖಂಡಿಸಿ ದೇಶಾದ್ಯಂತ ಡಿಸೆಂಬರ್ 29 ರಂದು ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳಲಾಗುವುದು ಎಂದು ಕರೆ ನೀಡಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…