Featured

ವೈದ್ಯರ ಮೇಲೆ ಹಲ್ಲೆ ನಡೆಸಿದರೆ 10 ವರ್ಷ ಜೈಲು, 10 ಲಕ್ಷ ದಂಡ : ಕೇಂದ್ರ ಸರ್ಕಾರದಿಂದ ಹೊಸ ಕಾನೂನು ಜಾರಿಗೆ -Vishwanews24

ನವದೆಹಲಿ:ಇನ್ನು ಮುಂದೆ ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ 10 ವರ್ಷ ಜೈಲು ಶಿಕ್ಷೆ ಅಥವಾ 10 ಲಕ್ಷ ರೂ ದಂಡ ಕಟ್ಟಬೇಕಾಗುತ್ತದೆ.

ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ ಅಂತಹವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೂ ದಂಡ ವಿಧಿಸುವ ಕಾಯ್ದೆ ತರಲು ಕಂದ್ರ ಮುಂದಾಗುತ್ತಿದೆ. ವೈದ್ಯರ ಮೇಲಿನ ದಾಳಿ, ಹಲ್ಲೆ ರೀತಿಯ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಸಾರ್ವಜನಿಕ ಅಭಿಪ್ರಾಯಗಳ ಸಂಗ್ರಹಕ್ಕಾಗಿ ಆರೋಗ್ಯ ಸಚಿವಾಲಯ ಆರೋಗ್ಯಪಾಲನೆ ಸೇವೆಗಳ ಸಿಬ್ಬಂದಿ ಮತ್ತು ಕ್ಲಿನಿಕಲ್ ಎಸ್ಟಾಬ್ಲಿಷ್‌ಮೆಂಟ್ಸ್ (ಹಿಂಸೆ ಮತ್ತು ಆಸ್ತಿ ಹಾನಿ ನಿಷೇಧ) ವಿಧೇಯಕ-2019ದ ಕರಡು ಶಾಸನದ ನಿಯಮಗಳನ್ನು ತೆರೆದಿಟ್ಟಿದೆ. ಸಾರ್ವಜನಿಕರು 30 ದಿನಗಳ ಒಳಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ದಂಡ ಸಂಹಿತೆ(ಐಪಿಸಿ) 320ನೇ ಕಲಂ ಇಟ್ಟುಕೊಂಡು ಈ ಕಾಯ್ದೆಯನ್ನು ರಚಿಸಲು ಸಕಾರ ಮುಂದಾಗಿದೆ. ಕರ್ತವ್ಯ ಸಲ್ಲಿಸುವ ವೇಳೆ ರೋಗಿಗಳ ಕುಟುಂಬ ಅಥವಾ ಅವರ ಕಡೆಯವರು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕನಿಷ್ಠ ಮೂರು ವರ್ಷ, ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರ ಜೊತೆಗೆ ಕನಿಷ್ಠ 2 ಲಕ್ಷದಿಂದ 10 ಲಕ್ಷ ರೂ. ದಂಡ ವಿಧಿಸುವ ಅಂಶ ಈ ಕರಡು ಮಸೂದೆಯಲ್ಲಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

17 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago