Featured

ವೈಭವದಿಂದ ನೆರವೇರಿದ  ಮಂಗಳೂರು ದಸರಾ ಶೋಭಾಯಾತ್ರೆ ಸಮಾರೋಪ – vishwanews24

ವೈಭವದಿಂದ ನೆರವೇರಿದ  ಮಂಗಳೂರು ದಸರಾ ಶೋಭಾಯಾತ್ರೆ ಸಮಾರೋಪ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು.

ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು.

ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು.

ಹುಲಿವೇಷ ಸಹಿತ ವಿಭಿನ್ನ ರೀತಿಯ ಸ್ತಬ್ಧಚಿತ್ರ, ವಿವಿಧ ದೇವಸ್ಥಾನಗಳು, ಸಂಘ ಸಂಸ್ಥೆಗಳ 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ವಿವಿಧ ಕಲಾತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

53 minutes ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

4 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

4 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

5 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

5 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

5 hours ago