ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು.
ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು.
ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು.
ಹುಲಿವೇಷ ಸಹಿತ ವಿಭಿನ್ನ ರೀತಿಯ ಸ್ತಬ್ಧಚಿತ್ರ, ವಿವಿಧ ದೇವಸ್ಥಾನಗಳು, ಸಂಘ ಸಂಸ್ಥೆಗಳ 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ವಿವಿಧ ಕಲಾತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]