ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು.
ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ ಜಲಸ್ತಂಭನವಾಯಿತು. ಈ ಮೂಲಕ ಮಂಗಳೂರು ದಸರಾ ಮೆರವಣಿಗೆ ಸಮಾಪನಗೊಂಡಿತು.
ಶೋಭಾಯಾತ್ರೆಯುದ್ದಕ್ಕೂ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್ಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿತು.
ಹುಲಿವೇಷ ಸಹಿತ ವಿಭಿನ್ನ ರೀತಿಯ ಸ್ತಬ್ಧಚಿತ್ರ, ವಿವಿಧ ದೇವಸ್ಥಾನಗಳು, ಸಂಘ ಸಂಸ್ಥೆಗಳ 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ವಿವಿಧ ಕಲಾತಂಡಗಳ ಪ್ರದರ್ಶನ ಆಕರ್ಷಣೀಯವಾಗಿತ್ತು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…